ಬೆಳಗಾವಿ : ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಯಾಣಿಕರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರು ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಂದು ಪ್ರಜ್ಞೆತಪ್ಪಿದ್ದ 8 ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಅಸ್ವಸ್ಥಗೊಂಡ ನಾಲ್ವರು ಪ್ರಯಾಣಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗೋವಾದಿಂದ ದೆಹಲಿಗೆ ಹೋಗುವ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಸಹ ಪ್ರಯಾಣಿಕರು ಬೆಳಗಾವಿ ರೈಲು ನಿಲ್ದಾಣ ಬರುತ್ತಿದ್ದಂತೆ ಈ ಘಟನೆಯನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಬಳಿಕ ಕೂಡಲೇ ಪ್ರಜ್ಞೆ ತಪ್ಪಿದ 8 ಜನ ಪ್ರಯಾಣಿಕರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಅಸ್ವಸ್ಥತಗೊಂಡ ನಾಲ್ವರು ಪ್ರಯಾಣಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಹ ಪ್ರಯಾಣಿಕರು ನೀಡಿದ ಆಹಾರ ಸೇವಿಸಿ ಪ್ರಜ್ಞೆ ತಪ್ಪಿದ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…