BREAKING NEWS

ಬಿಜೆಪಿಯಿಂದ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್ ಅಭಿಯಾನ

ಮಂಡ್ಯ : ಮಂತ್ರಿ ಸ್ಥಾನ ಸ್ವೀಕಾರ ಮಾಡಿದಾಗಿನಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಒಂದಲ್ಲ ಒಂದು ವಿಚಾರಕ್ಕೆ ರಾಜಕೀಯ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಅಂತಹದ್ದೇ ಒಂದು ಅಭಿಯಾನಕ್ಕೆ ಮುಂದಾಗಿದೆ.

ನಾಗಮಂಗಲ ಶಾಸಕ ಹಾಗೂ ಕೃಷಿ ಸಚಿವ ಸಿ.ಎಸ್.ಚಲುವರಾಯಸ್ವಾಮಿ ವಿರುದ್ಧ ಕೇಳಿಬಂದಿದ್ದ ಲಂಚ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಪೇಸಿಎಸ್ ಅಭಿಯಾನಕ್ಕೆ ಮುಂದಾಗಿದೆ.

ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ಕ್ಲೀನ್‍ಚಿಟ್ ಬೆನ್ನಲ್ಲೇ ಕೃಷಿ ಇಲಾಖೆಯ ಲಂಚಕ್ಕೆ ಒತ್ತಡ ಹಾಕಿರುವ ಆರೋಪ ಚಲುವರಾಯಸ್ವಾಮಿ ಬೆನ್ನಿಗೆ ಬಿದ್ದಿದೆ. ಕಳೆದ ತಿಂಗಳು ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದ ಸಿಐಡಿ ತನಿಖೆಯನ್ನು ಚಲುವರಾಯಸ್ವಾಮಿ ಎದುರಿಸಿದ್ದರು. ಆ ಪ್ರಕರಣದಲ್ಲಿ ಚಲುವರಾಯಸ್ವಾಮಿಗೆ ಕ್ಲೀನ್‍ಚೀಟ್ ಸಿಕ್ಕಿತ್ತು. ಈ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳ ಬಳಿ ಲಂಚ ಬೇಡಿಕೆ ಆರೋಪದಡಿ ಸಿಐಡಿ ತನಿಖೆಯನ್ನು ಎದುರಿಸುತ್ತಿದ್ದಾರೆ.

ಇನ್ನೊಂದೆಡೆ ಬಿಜೆಪಿ ಪೇಸಿಎಸ್ ಎಂಬ ಅಭಿಯಾನವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಎಂಬ ಅಭಿಯಾನ ಮಾಡಿ ಬಿಜೆಪಿಗೆ ತೀವ್ರ ಮುಜುಗರ ತಂದಿತ್ತು. ಇದ್ದನ್ನೇ ಇದೀಗ ಅಸ್ತ್ರವನ್ನು ಮಾಡಿಕೊಂಡಿರುವ ಬಿಜೆಪಿ, ಸಾಮಾಜಿಕ ಜಾಲ ತಾಣದಲ್ಲಿ ಕ್ಯೂಆರ್ ಕೋಡ್ ಬಳಕೆ ಮಾಡಿಕೊಂಡು ಪೇಸಿಎಸ್ ಎಂದು ಮಾಡಿ 6 ರಿಂದ 8 ಲಕ್ಷ ರೂಪಾಯಿಯನ್ನು ಇಲ್ಲಿ ಪಡೆಯಲಾಗುತ್ತದೆ ಎಂದು ಹಾಕಲಾಗಿದೆ. ಜೊತೆಗೆ ಟ್ಯಾಗ್‍ಲೈನ್‍ನಲ್ಲಿ ಸ್ಕ್ಯಾನ್ ಮಾಡಿ ಚಲುವರಾಯಸ್ವಾಮಿಯ ಭ್ರಷ್ಟಾಚಾರ ಹೊರ ಬರುತ್ತೆ ನೋಡಿ ಎಂದು ಹಾಕಿದ್ದಾರೆ. ಈ ಪೇಸಿಎಸ್ ಮೂಲಕ ಕೃಷಿ ಇಲಾಖೆಯ ಟ್ರಾನ್ಸ್ ಫರ್ ಗೆ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದ ಪ್ರಕರಣದ ಸಂಬಂಧ ಸಚಿವ ಚಲುವರಾಯಸ್ವಾಮಿ ರಾಜಭವನಕ್ಕೆ ಭೇಟಿ ಕೊಟ್ಟು ರಾಜ್ಯಪಾಲರಿಗೆ ಸಮಜಾಯಿಷಿ ನೀಡಿದ್ದಾರೆ. ನಕಲಿ ಪತ್ರದ ವಿರುದ್ಧ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಮಂಡ್ಯದಲ್ಲಿ ಆರು ಸ್ಥಾನ ಗೆದ್ದಿರೋದಕ್ಕೆ ಸಹಿಸುತ್ತಿಲ್ಲ. ಪತ್ರದಲ್ಲಿ ಕುಮಾರಸ್ವಾಮಿ ನಮ್ಮ ನಾಯಕರು ಅಂತಾ ಮೆನ್ಷನ್ ಮಾಡಿದ್ದಾರೆ. ಜನತಾದಳದವರೇ ಇದನ್ನ ಕ್ರಿಯೇಟ್ ಮಾಡಿದ್ದಾರೆ ಅಂತ ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಪೇಸಿಎಸ್ ಭಾರೀ ಸದ್ದು ಮಾಡುತ್ತಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

35 mins ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

1 hour ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

2 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

3 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

3 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

4 hours ago