BREAKING NEWS

ಬಿಜೆಪಿಯಿಂದ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್ ಅಭಿಯಾನ

ಮಂಡ್ಯ : ಮಂತ್ರಿ ಸ್ಥಾನ ಸ್ವೀಕಾರ ಮಾಡಿದಾಗಿನಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಒಂದಲ್ಲ ಒಂದು ವಿಚಾರಕ್ಕೆ ರಾಜಕೀಯ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಅಂತಹದ್ದೇ ಒಂದು ಅಭಿಯಾನಕ್ಕೆ ಮುಂದಾಗಿದೆ.

ನಾಗಮಂಗಲ ಶಾಸಕ ಹಾಗೂ ಕೃಷಿ ಸಚಿವ ಸಿ.ಎಸ್.ಚಲುವರಾಯಸ್ವಾಮಿ ವಿರುದ್ಧ ಕೇಳಿಬಂದಿದ್ದ ಲಂಚ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಪೇಸಿಎಸ್ ಅಭಿಯಾನಕ್ಕೆ ಮುಂದಾಗಿದೆ.

ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ಕ್ಲೀನ್‍ಚಿಟ್ ಬೆನ್ನಲ್ಲೇ ಕೃಷಿ ಇಲಾಖೆಯ ಲಂಚಕ್ಕೆ ಒತ್ತಡ ಹಾಕಿರುವ ಆರೋಪ ಚಲುವರಾಯಸ್ವಾಮಿ ಬೆನ್ನಿಗೆ ಬಿದ್ದಿದೆ. ಕಳೆದ ತಿಂಗಳು ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದ ಸಿಐಡಿ ತನಿಖೆಯನ್ನು ಚಲುವರಾಯಸ್ವಾಮಿ ಎದುರಿಸಿದ್ದರು. ಆ ಪ್ರಕರಣದಲ್ಲಿ ಚಲುವರಾಯಸ್ವಾಮಿಗೆ ಕ್ಲೀನ್‍ಚೀಟ್ ಸಿಕ್ಕಿತ್ತು. ಈ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳ ಬಳಿ ಲಂಚ ಬೇಡಿಕೆ ಆರೋಪದಡಿ ಸಿಐಡಿ ತನಿಖೆಯನ್ನು ಎದುರಿಸುತ್ತಿದ್ದಾರೆ.

ಇನ್ನೊಂದೆಡೆ ಬಿಜೆಪಿ ಪೇಸಿಎಸ್ ಎಂಬ ಅಭಿಯಾನವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಎಂಬ ಅಭಿಯಾನ ಮಾಡಿ ಬಿಜೆಪಿಗೆ ತೀವ್ರ ಮುಜುಗರ ತಂದಿತ್ತು. ಇದ್ದನ್ನೇ ಇದೀಗ ಅಸ್ತ್ರವನ್ನು ಮಾಡಿಕೊಂಡಿರುವ ಬಿಜೆಪಿ, ಸಾಮಾಜಿಕ ಜಾಲ ತಾಣದಲ್ಲಿ ಕ್ಯೂಆರ್ ಕೋಡ್ ಬಳಕೆ ಮಾಡಿಕೊಂಡು ಪೇಸಿಎಸ್ ಎಂದು ಮಾಡಿ 6 ರಿಂದ 8 ಲಕ್ಷ ರೂಪಾಯಿಯನ್ನು ಇಲ್ಲಿ ಪಡೆಯಲಾಗುತ್ತದೆ ಎಂದು ಹಾಕಲಾಗಿದೆ. ಜೊತೆಗೆ ಟ್ಯಾಗ್‍ಲೈನ್‍ನಲ್ಲಿ ಸ್ಕ್ಯಾನ್ ಮಾಡಿ ಚಲುವರಾಯಸ್ವಾಮಿಯ ಭ್ರಷ್ಟಾಚಾರ ಹೊರ ಬರುತ್ತೆ ನೋಡಿ ಎಂದು ಹಾಕಿದ್ದಾರೆ. ಈ ಪೇಸಿಎಸ್ ಮೂಲಕ ಕೃಷಿ ಇಲಾಖೆಯ ಟ್ರಾನ್ಸ್ ಫರ್ ಗೆ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದ ಪ್ರಕರಣದ ಸಂಬಂಧ ಸಚಿವ ಚಲುವರಾಯಸ್ವಾಮಿ ರಾಜಭವನಕ್ಕೆ ಭೇಟಿ ಕೊಟ್ಟು ರಾಜ್ಯಪಾಲರಿಗೆ ಸಮಜಾಯಿಷಿ ನೀಡಿದ್ದಾರೆ. ನಕಲಿ ಪತ್ರದ ವಿರುದ್ಧ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಮಂಡ್ಯದಲ್ಲಿ ಆರು ಸ್ಥಾನ ಗೆದ್ದಿರೋದಕ್ಕೆ ಸಹಿಸುತ್ತಿಲ್ಲ. ಪತ್ರದಲ್ಲಿ ಕುಮಾರಸ್ವಾಮಿ ನಮ್ಮ ನಾಯಕರು ಅಂತಾ ಮೆನ್ಷನ್ ಮಾಡಿದ್ದಾರೆ. ಜನತಾದಳದವರೇ ಇದನ್ನ ಕ್ರಿಯೇಟ್ ಮಾಡಿದ್ದಾರೆ ಅಂತ ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಪೇಸಿಎಸ್ ಭಾರೀ ಸದ್ದು ಮಾಡುತ್ತಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.

lokesh

Recent Posts

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

36 mins ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

42 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

48 mins ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

55 mins ago

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

4 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

4 hours ago