BREAKING NEWS

ಬಿಜೆಪಿಯಿಂದ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್ ಅಭಿಯಾನ

ಮಂಡ್ಯ : ಮಂತ್ರಿ ಸ್ಥಾನ ಸ್ವೀಕಾರ ಮಾಡಿದಾಗಿನಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಒಂದಲ್ಲ ಒಂದು ವಿಚಾರಕ್ಕೆ ರಾಜಕೀಯ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಅಂತಹದ್ದೇ ಒಂದು ಅಭಿಯಾನಕ್ಕೆ ಮುಂದಾಗಿದೆ.

ನಾಗಮಂಗಲ ಶಾಸಕ ಹಾಗೂ ಕೃಷಿ ಸಚಿವ ಸಿ.ಎಸ್.ಚಲುವರಾಯಸ್ವಾಮಿ ವಿರುದ್ಧ ಕೇಳಿಬಂದಿದ್ದ ಲಂಚ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ ಪೆಟ್ಟು ಕೊಡಲು ಬಿಜೆಪಿ ಪೇಸಿಎಸ್ ಅಭಿಯಾನಕ್ಕೆ ಮುಂದಾಗಿದೆ.

ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ಕ್ಲೀನ್‍ಚಿಟ್ ಬೆನ್ನಲ್ಲೇ ಕೃಷಿ ಇಲಾಖೆಯ ಲಂಚಕ್ಕೆ ಒತ್ತಡ ಹಾಕಿರುವ ಆರೋಪ ಚಲುವರಾಯಸ್ವಾಮಿ ಬೆನ್ನಿಗೆ ಬಿದ್ದಿದೆ. ಕಳೆದ ತಿಂಗಳು ಕಂಡಕ್ಟರ್ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದ ಸಿಐಡಿ ತನಿಖೆಯನ್ನು ಚಲುವರಾಯಸ್ವಾಮಿ ಎದುರಿಸಿದ್ದರು. ಆ ಪ್ರಕರಣದಲ್ಲಿ ಚಲುವರಾಯಸ್ವಾಮಿಗೆ ಕ್ಲೀನ್‍ಚೀಟ್ ಸಿಕ್ಕಿತ್ತು. ಈ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳ ಬಳಿ ಲಂಚ ಬೇಡಿಕೆ ಆರೋಪದಡಿ ಸಿಐಡಿ ತನಿಖೆಯನ್ನು ಎದುರಿಸುತ್ತಿದ್ದಾರೆ.

ಇನ್ನೊಂದೆಡೆ ಬಿಜೆಪಿ ಪೇಸಿಎಸ್ ಎಂಬ ಅಭಿಯಾನವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಎಂಬ ಅಭಿಯಾನ ಮಾಡಿ ಬಿಜೆಪಿಗೆ ತೀವ್ರ ಮುಜುಗರ ತಂದಿತ್ತು. ಇದ್ದನ್ನೇ ಇದೀಗ ಅಸ್ತ್ರವನ್ನು ಮಾಡಿಕೊಂಡಿರುವ ಬಿಜೆಪಿ, ಸಾಮಾಜಿಕ ಜಾಲ ತಾಣದಲ್ಲಿ ಕ್ಯೂಆರ್ ಕೋಡ್ ಬಳಕೆ ಮಾಡಿಕೊಂಡು ಪೇಸಿಎಸ್ ಎಂದು ಮಾಡಿ 6 ರಿಂದ 8 ಲಕ್ಷ ರೂಪಾಯಿಯನ್ನು ಇಲ್ಲಿ ಪಡೆಯಲಾಗುತ್ತದೆ ಎಂದು ಹಾಕಲಾಗಿದೆ. ಜೊತೆಗೆ ಟ್ಯಾಗ್‍ಲೈನ್‍ನಲ್ಲಿ ಸ್ಕ್ಯಾನ್ ಮಾಡಿ ಚಲುವರಾಯಸ್ವಾಮಿಯ ಭ್ರಷ್ಟಾಚಾರ ಹೊರ ಬರುತ್ತೆ ನೋಡಿ ಎಂದು ಹಾಕಿದ್ದಾರೆ. ಈ ಪೇಸಿಎಸ್ ಮೂಲಕ ಕೃಷಿ ಇಲಾಖೆಯ ಟ್ರಾನ್ಸ್ ಫರ್ ಗೆ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದ ಪ್ರಕರಣದ ಸಂಬಂಧ ಸಚಿವ ಚಲುವರಾಯಸ್ವಾಮಿ ರಾಜಭವನಕ್ಕೆ ಭೇಟಿ ಕೊಟ್ಟು ರಾಜ್ಯಪಾಲರಿಗೆ ಸಮಜಾಯಿಷಿ ನೀಡಿದ್ದಾರೆ. ನಕಲಿ ಪತ್ರದ ವಿರುದ್ಧ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಮಂಡ್ಯದಲ್ಲಿ ಆರು ಸ್ಥಾನ ಗೆದ್ದಿರೋದಕ್ಕೆ ಸಹಿಸುತ್ತಿಲ್ಲ. ಪತ್ರದಲ್ಲಿ ಕುಮಾರಸ್ವಾಮಿ ನಮ್ಮ ನಾಯಕರು ಅಂತಾ ಮೆನ್ಷನ್ ಮಾಡಿದ್ದಾರೆ. ಜನತಾದಳದವರೇ ಇದನ್ನ ಕ್ರಿಯೇಟ್ ಮಾಡಿದ್ದಾರೆ ಅಂತ ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಪೇಸಿಎಸ್ ಭಾರೀ ಸದ್ದು ಮಾಡುತ್ತಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

44 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago