BREAKING NEWS

ಅತಿಥಿ ಉಪನ್ಯಾಸಕರಿಗೆ ಸೇವಾನುಭವ ಆಧಾರದ ಮೇಲೆ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಸರ್ಕಾರದ ವಿರುದ್ಧ ಮುಷ್ಕರ ನಡೆಸಿದ್ದ ಅತಿಥಿ ಉಪನ್ಯಾಸಕರ ಮನವೊಲಿಸಲು ಸರ್ಕಾರ ಮುಂದಾಗಿದ್ದು, ಸೇವಾನುಭವದ ಆಧಾರದ ಮೇಲೆ ವೇತನ ಹೆಚ್ಚಿಸಲಾಗುವುದು. ಇದು ಹೊಸ ವರ್ಷಕ್ಕೆ ಕಾಂಗ್ರೆಸ್‌ನ ಗ್ಯಾರೆಂಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ಡ್ಯಾಮೆಜ್‌ ಕಂಟ್ರೋಲ್‌ಗೆ ಸಿಎಂ ಮುಂದಾಗಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾವು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದ್ದೇವೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದಿದ್ದಾರೆ.

ಎಕ್ಸ್‌ ನಲ್ಲೇನಿದೆ?
ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ನಮ್ಮ‌ ಸರ್ಕಾರ ತೆಗೆದುಕೊಂಡಿದೆ.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ.

ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು.

ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ನೊಂದಿಗೆ ಬರೆದುಕೊಂಡಿದ್ದಾರೆ.

https://x.com/siddaramaiah/status/1743590634521600294?s=20

andolanait

Recent Posts

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

31 mins ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

1 hour ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

2 hours ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

2 hours ago

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

5 hours ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

5 hours ago