BREAKING NEWS

40 ಅಡಿ ಬಾವಿಗಿಳಿದು ಬೆಕ್ಕಿನ ಮರಿ ರಕ್ಷಿಸಿದ ಪೇಜಾವರ ಸ್ವಾಮೀಜಿ

ಉಡುಪಿ : ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಸ್ವತಃ ಬಾವಿಗೆ ಇಳಿದು ರಕ್ಷಿಸಿದ ಘಟನೆ ನಡೆದಿದೆ.

ಸುಮಾರು 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ಬಿದ್ದು ಅಳತೊಡಗಿತ್ತು. ಇದರ ಆಕ್ರಂದನ ಕೇಳಿ ಸ್ವತಃ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾವಿಗೆ ಇಳಿದು ಮರಿಯನ್ನು ರಕ್ಷಿಸಿದ್ದಾರೆ. ಉಡುಪಿಯ ಮುಚ್ಲುಕೋಡು ಸುಬ್ರಮಣ್ಯ ದೇವಾಲಯದಲ್ಲಿ ಈ ಘಟನೆ ನಡೆದಿದೆ.

ಉಡುಪಿ ಸಮೀಪದ ಮುಚ್ಲುಕೋಡು ಶ್ರೀ ಸುಬ್ರಮಣ್ಯ ದೇವಾಲಯಕ್ಕೆ ಸ್ವಾಮೀಜಿ ಭೇಟಿ ನೀಡಿದ್ದರು. ಈ ಸಂದರ್ಭ ಬಾವಿಗೆ ಬೆಕ್ಕೊಂದು ಬಿದ್ದಿರುವ ಬಗ್ಗೆ ದೇವಾಲಯದ ಸಿಬ್ಬಂದಿ ಮಾಹಿತಿ ನೀಡಿದರು. ತಕ್ಷಣ ಸ್ವಾಮೀಜಿ ಅವರು ಬಾವಿಯ ನೀರು ಸೇದುವ ಹಗ್ಗವನ್ನು ಹಿಡಿದುಕೊಂಡು ಸುಮಾರು 40 ಅಡಿ ಆಳದ, 4-5 ಅಡಿ ಅಗಲದ ಕಲ್ಲು ಕಟ್ಟಿರುವ ಬಾವಿಗೆ ಇಳಿದೇಬಿಟ್ಟರು.

ನಂತರ ಕೈಗೆ ಬಟ್ಟೆಯೊಂದನ್ನು ಗ್ಲೌಸ್‌ನಂತೆ ಸುತ್ತಿಕೊಂಡರು. ಜೀವದಾಸೆಗೆ ಬಾವಿಯೊಳಗೆ ಕಲ್ಲಿನ ಅಟ್ಟೆಮೇಲೆ ಕುಳಿತಿದ್ದ ಬೆಕ್ಕನ್ನು ಜಾಗ್ರತೆಯಿಂದ ಹಿಡಿದು ಹಗ್ಗಕ್ಕೆ ಕಟ್ಟಿದ್ದ ಬಕೆಟ್‌ಗೆ ಹಾಕಿದರು. ಸಿಬ್ಬಂದಿ ಬಕೆಟ್‌ನ್ನು ಅರ್ಧಕ್ಕೆ ಎಳೆಯುವಷ್ಟರಲ್ಲಿ ಬೆಕ್ಕು ಹೆದರಿ ಪುನಃ ಬಾವಿಗೆ ಹಾರಿತು. ಪುನಃ ಒಂದು ಕೈಯಲ್ಲಿ ಬೆಕ್ಕನ್ನು ಹಿಡಿದು, ಇನ್ನೊಂದು ಕೈಯಲ್ಲಿ ಹಗ್ಗವನ್ನು ಹಿಡಿದ ಸರ್ಕಸ್‌ನಂತೆ ಸಾಹಸದಿಂದ ಬಾವಿಯಿಂದ ಮೇಲಕ್ಕೆ ಬಂದು, ಬೆಕ್ಕನ್ನು ರಕ್ಷಿಸಿದರು. ಪೇಜಾವರ ಶ್ರೀಗಳ ಈ ಮಾನವೀಯ ಕಾರ್ಯ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

lokesh

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

4 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

4 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

5 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

5 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

5 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

7 hours ago