ಹಾಸನ: ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿದೇಶಕ್ಕೆ ಹಾರಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ 113ಕ್ಕೂ ಹೆಚ್ಚು ವಿವಿಧ ಸಂಘಟನೆಗಳು, ಮಹಿಳಾ ಸಾಹಿತಿಗಳು, ವೈದ್ಯರು ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಪ್ರತಿಭಟನೆ ನಡೆಸಿದರು.
ʼಹೋರಾಟದ ನಡಿಗೆ ಹಾಸನದ ಕಡೆಗೆʼ ಎಂಬ ಟ್ಯಾಗ್ ಲೈನ್ ಮೂಲಕ ಸಾಹಿತಿಗಳು ಹೋರಾಟ ನಡೆಸಿದ್ದಾರೆ. ಹಾಸನದ ಹೇಮಾವತಿ ವೃತ್ತದಿಂದ ಆರಂಭವಾದ ಮೆರವಣಿಗೆ ನಗರದ ಡಿಸಿ ಕಚೇರಿ ಬಳಿ ಕೊನೆಗೊಳ್ಳಲಿದ್ದು ಬಳಿಕ ಬೃಹತ್ ಸಮಾವೇಶ ನಡೆಸಲಿದ್ದಾರೆ.
ವಿವಿಧ ಮಹಿಳಾ ಸಂಘಟನೆಗಳು, ವೈದ್ಯರು, ಸಾಹಿತಿಗಳು ಸೇರಿದಂತೆ ರಾಜ್ಯಾದ ವಿವಿಧ ಊರುಗಳ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಿಳಾ ವಿಡಿಯೋಗಳನ್ನು ಹರಿಬಿಡುತ್ತಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪಾಪಿ ಪ್ರಜ್ವಲ್ನನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ರ್ಯಾಲಿಯುದ್ದಕ್ಕೂ ಮಹಿಳೆಯರು ಘೋಷಣೆ ಕೂಗುವ ಮೂಲಕ, ಅಲ್ಲಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದಾರೆ
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…