ಹಾಸನ: ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿದೇಶಕ್ಕೆ ಹಾರಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ 113ಕ್ಕೂ ಹೆಚ್ಚು ವಿವಿಧ ಸಂಘಟನೆಗಳು, ಮಹಿಳಾ ಸಾಹಿತಿಗಳು, ವೈದ್ಯರು ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಪ್ರತಿಭಟನೆ ನಡೆಸಿದರು.
ʼಹೋರಾಟದ ನಡಿಗೆ ಹಾಸನದ ಕಡೆಗೆʼ ಎಂಬ ಟ್ಯಾಗ್ ಲೈನ್ ಮೂಲಕ ಸಾಹಿತಿಗಳು ಹೋರಾಟ ನಡೆಸಿದ್ದಾರೆ. ಹಾಸನದ ಹೇಮಾವತಿ ವೃತ್ತದಿಂದ ಆರಂಭವಾದ ಮೆರವಣಿಗೆ ನಗರದ ಡಿಸಿ ಕಚೇರಿ ಬಳಿ ಕೊನೆಗೊಳ್ಳಲಿದ್ದು ಬಳಿಕ ಬೃಹತ್ ಸಮಾವೇಶ ನಡೆಸಲಿದ್ದಾರೆ.
ವಿವಿಧ ಮಹಿಳಾ ಸಂಘಟನೆಗಳು, ವೈದ್ಯರು, ಸಾಹಿತಿಗಳು ಸೇರಿದಂತೆ ರಾಜ್ಯಾದ ವಿವಿಧ ಊರುಗಳ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಿಳಾ ವಿಡಿಯೋಗಳನ್ನು ಹರಿಬಿಡುತ್ತಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪಾಪಿ ಪ್ರಜ್ವಲ್ನನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ರ್ಯಾಲಿಯುದ್ದಕ್ಕೂ ಮಹಿಳೆಯರು ಘೋಷಣೆ ಕೂಗುವ ಮೂಲಕ, ಅಲ್ಲಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದಾರೆ
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…