BREAKING NEWS

ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ:ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ

ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಬಂಧ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಡ್‌ಗಳ ವ್ಯವಸ್ಥೆ, ಅಗತ್ಯ ಔಷಧಿಗಳ ದಾಸ್ತಾನಿಗೆ ಕ್ರಮವಹಿಸಿ ಎಂದರಲ್ಲದೆ, ಅಂಬುಲೆನ್ಸ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದರ ಜೊತೆಗೆ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಶೀತ, ನೆಗಡಿ, ಕೆಮ್ಮು ಸಾಮಾನ್ಯವಾಗಿ ಬರುತ್ತದೆ ಅದಕ್ಕೆ ಹೆದರುವುದು ಬೇಡ ಮುನ್ನೆಚ್ಚರಿಕೆಯಿಂದ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ವೃದ್ದರು ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಕಡಿಮೆ ಮಾಡುವ ಬಗ್ಗೆ ಹಾಗೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಅರಿವು ಮೂಡಿಸಿ ಎಂದು ತಿಳಿಸಿದರು.

ಕೋವಿಡ್ RTPCR ಪರೀಕ್ಷೆ ಪ್ರತಿ ತಾಲೂಕಿನಲ್ಲಿಯೂ ಮಾಡಿಸಲಾಗುತ್ತಿದೆ. ಬೆಂಗಳೂರು ಬಿಟ್ಟರೆ ಮೈಸೂರಿನಲ್ಲಿ ಪಾಸಿಟಿವಿಟಿ ಜಾಸ್ತಿ ಇದೆ. ಕಳೆದ 8 ದಿನಗಳಲ್ಲಿ ಮೂರು ಸಾವಾಗಿದ್ದು 84 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ನಿನ್ನೆ 25 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. 20 ಕೋವಿಡ್ ಸೋಂಕಿತರು ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿಗಳಾದ ಡಾ. ಮಹಾದೇವ ಪ್ರಸಾದ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರ ಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

3 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

3 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

3 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

4 hours ago