BREAKING NEWS

ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ:ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ

ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಬಂಧ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಡ್‌ಗಳ ವ್ಯವಸ್ಥೆ, ಅಗತ್ಯ ಔಷಧಿಗಳ ದಾಸ್ತಾನಿಗೆ ಕ್ರಮವಹಿಸಿ ಎಂದರಲ್ಲದೆ, ಅಂಬುಲೆನ್ಸ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದರ ಜೊತೆಗೆ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಶೀತ, ನೆಗಡಿ, ಕೆಮ್ಮು ಸಾಮಾನ್ಯವಾಗಿ ಬರುತ್ತದೆ ಅದಕ್ಕೆ ಹೆದರುವುದು ಬೇಡ ಮುನ್ನೆಚ್ಚರಿಕೆಯಿಂದ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ವೃದ್ದರು ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಕಡಿಮೆ ಮಾಡುವ ಬಗ್ಗೆ ಹಾಗೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಅರಿವು ಮೂಡಿಸಿ ಎಂದು ತಿಳಿಸಿದರು.

ಕೋವಿಡ್ RTPCR ಪರೀಕ್ಷೆ ಪ್ರತಿ ತಾಲೂಕಿನಲ್ಲಿಯೂ ಮಾಡಿಸಲಾಗುತ್ತಿದೆ. ಬೆಂಗಳೂರು ಬಿಟ್ಟರೆ ಮೈಸೂರಿನಲ್ಲಿ ಪಾಸಿಟಿವಿಟಿ ಜಾಸ್ತಿ ಇದೆ. ಕಳೆದ 8 ದಿನಗಳಲ್ಲಿ ಮೂರು ಸಾವಾಗಿದ್ದು 84 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ನಿನ್ನೆ 25 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. 20 ಕೋವಿಡ್ ಸೋಂಕಿತರು ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿಗಳಾದ ಡಾ. ಮಹಾದೇವ ಪ್ರಸಾದ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರ ಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago