BREAKING NEWS

ರಾಜ್ಯದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದೇ ಭ್ರಷ್ಟಾಚಾರದ ಕಾರಣಕ್ಕಾಗಿ : ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ಲೂಟಿ ಹಗರಣಗಳ ಬಗ್ಗೆ ತನಿಖೆಯಾಗಬೇಕು. ನಾವು ಕೂಡ ಅದಕ್ಕೆ ಸಿದ್ದರಿದ್ದೇವೆ. ಬಿಜೆಪಿಯವರನ್ನು ಒಳಗೊಂಡಂತೆ ತನಿಖೆಯಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಕಾರದಲ್ಲಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಿಮಾಲಯದ ಎತ್ತರದವರೆಗೂ ಹಗರಣ ಮಾಡಿದ್ದಾರೆ. 2000 ಕೋಟಿ ರೂ.ಗಳು ಹರಿದುಹೋಗಿದೆ ಎಂದು ಗಂಭೀರ ಆರೋಪ ಮಾಡಿದರು.

ಆರ್.ಅಶೋಕ್, ಲೂಟಿ ರವಿ, ನಕಲಿ ಸ್ವಾಮಿ, ಬ್ಲಾಕ್‍ಮೇಲ್ ಸ್ವಾಮಿ ಇವರೆಲ್ಲ ಇದ್ದಾರೆ. ಇವರೆಲ್ಲ ಏನು ನಡೆಸಿದ್ದಾರೆ ಎಂದು ತನಿಖೆ ನಡೆಸಲಿ. ಮೊದಲು ತನಿಖೆಯಾಗಬೇಕು. ನಾವು ಕೂಡ ಅದನ್ನೇ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.

ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ್ದೇ ಬಿಜೆಪಿ. ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಮಾತನಾಡದೆ ಮೌನವಾಗಿದುದ್ದಕ್ಕೆ ಕಾರಣ ಮೊದಲು ಇಲಾಖೆ ಮಾಹಿತಿ ನೀಡಲಿ ಎಂಬುದಾಗಿತ್ತು. ನಿನ್ನೆ ಮಾಹಿತಿ ಹೊರಬಂದಿದೆ. ಜಾರಿನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಸಿಬಿಐ ಎಲ್ಲವೂ ಅವರ ಬಳಿಯೇ ಇದೆ ತನಿಖೆ ಮಾಡಲಿ ಯಾರು ಬೇಡ ಎಂದಿದ್ದಾರೆ. ಅದೆನೋ ಬಿಚ್ಚುತ್ತಾರೋ ಬಿಚ್ಚಲಿ ಎಂದು ಸವಾಲು ಹಾಕಿದರು.
ಕಲೆಕ್ಷನ್ ಮಾಸ್ಟರ್ ಎಂದು ಬಿಜೆಪಿಯವರು ಪೊಸ್ಟರ್ ಹಾಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಮಾಲಯ ಪರ್ವತದ ಮೇಲೂ ಇವರು ಭ್ರಷ್ಟಾಚಾರ ಮಾಡಿದ್ದಾರೆ. ಇಡೀ ದೇಶದಲ್ಲಿ ಹಿಮಾಲಯದವರೆಗೂ ಹಗರಣಗಳಾಗಿವೆ. ಹಿಂದೆ 2000 ಕೋಟಿ ರೂ. ಹೋಗಿದೆಯಂತೆ. ಮುಖ್ಯಮಂತ್ರಿ ಕಚೇರಿಯಲ್ಲೇ ಇದೆಲ್ಲ ನಡೆದಿತ್ತು. ಎಷ್ಟೆಷ್ಟು ಪರ್ಸಂಟೇಜ್ ಹೋಗಿತ್ತು ಎಂದು ಶಾಸಕರು ಮತ್ತು ಮಾಜಿ ಸಚಿವರಿಂದಲೇ ಹೇಳಿಸಲು ಸಿದ್ದನಿದ್ದೇನೆ. ಸದ್ಯಕ್ಕೆ ಈಗ ಬೇಡ. ಸಮಯ ಬರುತ್ತದೆ ಆಗ ಮಾತನಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದೇ ಭ್ರಷ್ಟಾಚಾರದ ಕಾರಣಕ್ಕಾಗಿ. ಆದಾಯ ತೆರಿಗೆ ದಾಳಿಯಲ್ಲಿ ಸಿಕ್ಕಿರುವ ಹಣಕ್ಕೆ ಬಿಜೆಪಿ ನಾಯಕರ ಸಂಪರ್ಕವಿದೆ. ಕಾಂಗ್ರೆಸ್‍ಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಗುತ್ತಿಗೆದಾರರು ಕಮೀಷನನ್ನು ಬಿಜೆಪಿ ಪರವಾಗಿಯೇ ವಸೂಲಿ ಮಾಡಿದ್ದಾರೆ. ಈ ಭ್ರಷ್ಟಾಚಾರ ಬಿಜೆಪಿಯ ಕೂಸು. ಆದಾಯ ತೆರಿಗೆ ದಾಳಿಯಲ್ಲಿ ಜಪ್ತಿ ಮಾಡಲಾಗಿರುವ ಡೈರಿಯಲ್ಲಿ ಎಲ್ಲ ಮಾಹಿತಿ ಇದೆ. ಅದು ಹೊರಬರಬೇಕು ಎಂದು ಆಗ್ರಹಿಸಿದರು.

lokesh

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

38 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

1 hour ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

1 hour ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

2 hours ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

2 hours ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago