BREAKING NEWS

ರಾಜ್ಯದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದೇ ಭ್ರಷ್ಟಾಚಾರದ ಕಾರಣಕ್ಕಾಗಿ : ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ಲೂಟಿ ಹಗರಣಗಳ ಬಗ್ಗೆ ತನಿಖೆಯಾಗಬೇಕು. ನಾವು ಕೂಡ ಅದಕ್ಕೆ ಸಿದ್ದರಿದ್ದೇವೆ. ಬಿಜೆಪಿಯವರನ್ನು ಒಳಗೊಂಡಂತೆ ತನಿಖೆಯಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಕಾರದಲ್ಲಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಿಮಾಲಯದ ಎತ್ತರದವರೆಗೂ ಹಗರಣ ಮಾಡಿದ್ದಾರೆ. 2000 ಕೋಟಿ ರೂ.ಗಳು ಹರಿದುಹೋಗಿದೆ ಎಂದು ಗಂಭೀರ ಆರೋಪ ಮಾಡಿದರು.

ಆರ್.ಅಶೋಕ್, ಲೂಟಿ ರವಿ, ನಕಲಿ ಸ್ವಾಮಿ, ಬ್ಲಾಕ್‍ಮೇಲ್ ಸ್ವಾಮಿ ಇವರೆಲ್ಲ ಇದ್ದಾರೆ. ಇವರೆಲ್ಲ ಏನು ನಡೆಸಿದ್ದಾರೆ ಎಂದು ತನಿಖೆ ನಡೆಸಲಿ. ಮೊದಲು ತನಿಖೆಯಾಗಬೇಕು. ನಾವು ಕೂಡ ಅದನ್ನೇ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.

ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ್ದೇ ಬಿಜೆಪಿ. ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಮಾತನಾಡದೆ ಮೌನವಾಗಿದುದ್ದಕ್ಕೆ ಕಾರಣ ಮೊದಲು ಇಲಾಖೆ ಮಾಹಿತಿ ನೀಡಲಿ ಎಂಬುದಾಗಿತ್ತು. ನಿನ್ನೆ ಮಾಹಿತಿ ಹೊರಬಂದಿದೆ. ಜಾರಿನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಸಿಬಿಐ ಎಲ್ಲವೂ ಅವರ ಬಳಿಯೇ ಇದೆ ತನಿಖೆ ಮಾಡಲಿ ಯಾರು ಬೇಡ ಎಂದಿದ್ದಾರೆ. ಅದೆನೋ ಬಿಚ್ಚುತ್ತಾರೋ ಬಿಚ್ಚಲಿ ಎಂದು ಸವಾಲು ಹಾಕಿದರು.
ಕಲೆಕ್ಷನ್ ಮಾಸ್ಟರ್ ಎಂದು ಬಿಜೆಪಿಯವರು ಪೊಸ್ಟರ್ ಹಾಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಮಾಲಯ ಪರ್ವತದ ಮೇಲೂ ಇವರು ಭ್ರಷ್ಟಾಚಾರ ಮಾಡಿದ್ದಾರೆ. ಇಡೀ ದೇಶದಲ್ಲಿ ಹಿಮಾಲಯದವರೆಗೂ ಹಗರಣಗಳಾಗಿವೆ. ಹಿಂದೆ 2000 ಕೋಟಿ ರೂ. ಹೋಗಿದೆಯಂತೆ. ಮುಖ್ಯಮಂತ್ರಿ ಕಚೇರಿಯಲ್ಲೇ ಇದೆಲ್ಲ ನಡೆದಿತ್ತು. ಎಷ್ಟೆಷ್ಟು ಪರ್ಸಂಟೇಜ್ ಹೋಗಿತ್ತು ಎಂದು ಶಾಸಕರು ಮತ್ತು ಮಾಜಿ ಸಚಿವರಿಂದಲೇ ಹೇಳಿಸಲು ಸಿದ್ದನಿದ್ದೇನೆ. ಸದ್ಯಕ್ಕೆ ಈಗ ಬೇಡ. ಸಮಯ ಬರುತ್ತದೆ ಆಗ ಮಾತನಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದೇ ಭ್ರಷ್ಟಾಚಾರದ ಕಾರಣಕ್ಕಾಗಿ. ಆದಾಯ ತೆರಿಗೆ ದಾಳಿಯಲ್ಲಿ ಸಿಕ್ಕಿರುವ ಹಣಕ್ಕೆ ಬಿಜೆಪಿ ನಾಯಕರ ಸಂಪರ್ಕವಿದೆ. ಕಾಂಗ್ರೆಸ್‍ಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಗುತ್ತಿಗೆದಾರರು ಕಮೀಷನನ್ನು ಬಿಜೆಪಿ ಪರವಾಗಿಯೇ ವಸೂಲಿ ಮಾಡಿದ್ದಾರೆ. ಈ ಭ್ರಷ್ಟಾಚಾರ ಬಿಜೆಪಿಯ ಕೂಸು. ಆದಾಯ ತೆರಿಗೆ ದಾಳಿಯಲ್ಲಿ ಜಪ್ತಿ ಮಾಡಲಾಗಿರುವ ಡೈರಿಯಲ್ಲಿ ಎಲ್ಲ ಮಾಹಿತಿ ಇದೆ. ಅದು ಹೊರಬರಬೇಕು ಎಂದು ಆಗ್ರಹಿಸಿದರು.

lokesh

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

2 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

2 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

2 hours ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

2 hours ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

2 hours ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

2 hours ago