ಬೆಂಗಳೂರು : ರಾಜ್ಯದಲ್ಲಿ ಲೂಟಿ ಹಗರಣಗಳ ಬಗ್ಗೆ ತನಿಖೆಯಾಗಬೇಕು. ನಾವು ಕೂಡ ಅದಕ್ಕೆ ಸಿದ್ದರಿದ್ದೇವೆ. ಬಿಜೆಪಿಯವರನ್ನು ಒಳಗೊಂಡಂತೆ ತನಿಖೆಯಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಕಾರದಲ್ಲಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಿಮಾಲಯದ ಎತ್ತರದವರೆಗೂ ಹಗರಣ ಮಾಡಿದ್ದಾರೆ. 2000 ಕೋಟಿ ರೂ.ಗಳು ಹರಿದುಹೋಗಿದೆ ಎಂದು ಗಂಭೀರ ಆರೋಪ ಮಾಡಿದರು.
ಆರ್.ಅಶೋಕ್, ಲೂಟಿ ರವಿ, ನಕಲಿ ಸ್ವಾಮಿ, ಬ್ಲಾಕ್ಮೇಲ್ ಸ್ವಾಮಿ ಇವರೆಲ್ಲ ಇದ್ದಾರೆ. ಇವರೆಲ್ಲ ಏನು ನಡೆಸಿದ್ದಾರೆ ಎಂದು ತನಿಖೆ ನಡೆಸಲಿ. ಮೊದಲು ತನಿಖೆಯಾಗಬೇಕು. ನಾವು ಕೂಡ ಅದನ್ನೇ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.
ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ್ದೇ ಬಿಜೆಪಿ. ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಮಾತನಾಡದೆ ಮೌನವಾಗಿದುದ್ದಕ್ಕೆ ಕಾರಣ ಮೊದಲು ಇಲಾಖೆ ಮಾಹಿತಿ ನೀಡಲಿ ಎಂಬುದಾಗಿತ್ತು. ನಿನ್ನೆ ಮಾಹಿತಿ ಹೊರಬಂದಿದೆ. ಜಾರಿನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಸಿಬಿಐ ಎಲ್ಲವೂ ಅವರ ಬಳಿಯೇ ಇದೆ ತನಿಖೆ ಮಾಡಲಿ ಯಾರು ಬೇಡ ಎಂದಿದ್ದಾರೆ. ಅದೆನೋ ಬಿಚ್ಚುತ್ತಾರೋ ಬಿಚ್ಚಲಿ ಎಂದು ಸವಾಲು ಹಾಕಿದರು.
ಕಲೆಕ್ಷನ್ ಮಾಸ್ಟರ್ ಎಂದು ಬಿಜೆಪಿಯವರು ಪೊಸ್ಟರ್ ಹಾಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಮಾಲಯ ಪರ್ವತದ ಮೇಲೂ ಇವರು ಭ್ರಷ್ಟಾಚಾರ ಮಾಡಿದ್ದಾರೆ. ಇಡೀ ದೇಶದಲ್ಲಿ ಹಿಮಾಲಯದವರೆಗೂ ಹಗರಣಗಳಾಗಿವೆ. ಹಿಂದೆ 2000 ಕೋಟಿ ರೂ. ಹೋಗಿದೆಯಂತೆ. ಮುಖ್ಯಮಂತ್ರಿ ಕಚೇರಿಯಲ್ಲೇ ಇದೆಲ್ಲ ನಡೆದಿತ್ತು. ಎಷ್ಟೆಷ್ಟು ಪರ್ಸಂಟೇಜ್ ಹೋಗಿತ್ತು ಎಂದು ಶಾಸಕರು ಮತ್ತು ಮಾಜಿ ಸಚಿವರಿಂದಲೇ ಹೇಳಿಸಲು ಸಿದ್ದನಿದ್ದೇನೆ. ಸದ್ಯಕ್ಕೆ ಈಗ ಬೇಡ. ಸಮಯ ಬರುತ್ತದೆ ಆಗ ಮಾತನಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದೇ ಭ್ರಷ್ಟಾಚಾರದ ಕಾರಣಕ್ಕಾಗಿ. ಆದಾಯ ತೆರಿಗೆ ದಾಳಿಯಲ್ಲಿ ಸಿಕ್ಕಿರುವ ಹಣಕ್ಕೆ ಬಿಜೆಪಿ ನಾಯಕರ ಸಂಪರ್ಕವಿದೆ. ಕಾಂಗ್ರೆಸ್ಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಗುತ್ತಿಗೆದಾರರು ಕಮೀಷನನ್ನು ಬಿಜೆಪಿ ಪರವಾಗಿಯೇ ವಸೂಲಿ ಮಾಡಿದ್ದಾರೆ. ಈ ಭ್ರಷ್ಟಾಚಾರ ಬಿಜೆಪಿಯ ಕೂಸು. ಆದಾಯ ತೆರಿಗೆ ದಾಳಿಯಲ್ಲಿ ಜಪ್ತಿ ಮಾಡಲಾಗಿರುವ ಡೈರಿಯಲ್ಲಿ ಎಲ್ಲ ಮಾಹಿತಿ ಇದೆ. ಅದು ಹೊರಬರಬೇಕು ಎಂದು ಆಗ್ರಹಿಸಿದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…