BREAKING NEWS

ರಾಜ್ಯದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದೇ ಭ್ರಷ್ಟಾಚಾರದ ಕಾರಣಕ್ಕಾಗಿ : ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ಲೂಟಿ ಹಗರಣಗಳ ಬಗ್ಗೆ ತನಿಖೆಯಾಗಬೇಕು. ನಾವು ಕೂಡ ಅದಕ್ಕೆ ಸಿದ್ದರಿದ್ದೇವೆ. ಬಿಜೆಪಿಯವರನ್ನು ಒಳಗೊಂಡಂತೆ ತನಿಖೆಯಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಕಾರದಲ್ಲಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಿಮಾಲಯದ ಎತ್ತರದವರೆಗೂ ಹಗರಣ ಮಾಡಿದ್ದಾರೆ. 2000 ಕೋಟಿ ರೂ.ಗಳು ಹರಿದುಹೋಗಿದೆ ಎಂದು ಗಂಭೀರ ಆರೋಪ ಮಾಡಿದರು.

ಆರ್.ಅಶೋಕ್, ಲೂಟಿ ರವಿ, ನಕಲಿ ಸ್ವಾಮಿ, ಬ್ಲಾಕ್‍ಮೇಲ್ ಸ್ವಾಮಿ ಇವರೆಲ್ಲ ಇದ್ದಾರೆ. ಇವರೆಲ್ಲ ಏನು ನಡೆಸಿದ್ದಾರೆ ಎಂದು ತನಿಖೆ ನಡೆಸಲಿ. ಮೊದಲು ತನಿಖೆಯಾಗಬೇಕು. ನಾವು ಕೂಡ ಅದನ್ನೇ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.

ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ್ದೇ ಬಿಜೆಪಿ. ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಮಾತನಾಡದೆ ಮೌನವಾಗಿದುದ್ದಕ್ಕೆ ಕಾರಣ ಮೊದಲು ಇಲಾಖೆ ಮಾಹಿತಿ ನೀಡಲಿ ಎಂಬುದಾಗಿತ್ತು. ನಿನ್ನೆ ಮಾಹಿತಿ ಹೊರಬಂದಿದೆ. ಜಾರಿನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಸಿಬಿಐ ಎಲ್ಲವೂ ಅವರ ಬಳಿಯೇ ಇದೆ ತನಿಖೆ ಮಾಡಲಿ ಯಾರು ಬೇಡ ಎಂದಿದ್ದಾರೆ. ಅದೆನೋ ಬಿಚ್ಚುತ್ತಾರೋ ಬಿಚ್ಚಲಿ ಎಂದು ಸವಾಲು ಹಾಕಿದರು.
ಕಲೆಕ್ಷನ್ ಮಾಸ್ಟರ್ ಎಂದು ಬಿಜೆಪಿಯವರು ಪೊಸ್ಟರ್ ಹಾಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಮಾಲಯ ಪರ್ವತದ ಮೇಲೂ ಇವರು ಭ್ರಷ್ಟಾಚಾರ ಮಾಡಿದ್ದಾರೆ. ಇಡೀ ದೇಶದಲ್ಲಿ ಹಿಮಾಲಯದವರೆಗೂ ಹಗರಣಗಳಾಗಿವೆ. ಹಿಂದೆ 2000 ಕೋಟಿ ರೂ. ಹೋಗಿದೆಯಂತೆ. ಮುಖ್ಯಮಂತ್ರಿ ಕಚೇರಿಯಲ್ಲೇ ಇದೆಲ್ಲ ನಡೆದಿತ್ತು. ಎಷ್ಟೆಷ್ಟು ಪರ್ಸಂಟೇಜ್ ಹೋಗಿತ್ತು ಎಂದು ಶಾಸಕರು ಮತ್ತು ಮಾಜಿ ಸಚಿವರಿಂದಲೇ ಹೇಳಿಸಲು ಸಿದ್ದನಿದ್ದೇನೆ. ಸದ್ಯಕ್ಕೆ ಈಗ ಬೇಡ. ಸಮಯ ಬರುತ್ತದೆ ಆಗ ಮಾತನಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದೇ ಭ್ರಷ್ಟಾಚಾರದ ಕಾರಣಕ್ಕಾಗಿ. ಆದಾಯ ತೆರಿಗೆ ದಾಳಿಯಲ್ಲಿ ಸಿಕ್ಕಿರುವ ಹಣಕ್ಕೆ ಬಿಜೆಪಿ ನಾಯಕರ ಸಂಪರ್ಕವಿದೆ. ಕಾಂಗ್ರೆಸ್‍ಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಗುತ್ತಿಗೆದಾರರು ಕಮೀಷನನ್ನು ಬಿಜೆಪಿ ಪರವಾಗಿಯೇ ವಸೂಲಿ ಮಾಡಿದ್ದಾರೆ. ಈ ಭ್ರಷ್ಟಾಚಾರ ಬಿಜೆಪಿಯ ಕೂಸು. ಆದಾಯ ತೆರಿಗೆ ದಾಳಿಯಲ್ಲಿ ಜಪ್ತಿ ಮಾಡಲಾಗಿರುವ ಡೈರಿಯಲ್ಲಿ ಎಲ್ಲ ಮಾಹಿತಿ ಇದೆ. ಅದು ಹೊರಬರಬೇಕು ಎಂದು ಆಗ್ರಹಿಸಿದರು.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

5 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

7 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

9 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

10 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

10 hours ago