BREAKING NEWS

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ : ಬೊಮ್ಮಾಯಿ‌

ಬೆಂಗಳೂರು : ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ ಎಂದರು.

ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ ಎಂದರು.

ಮಾಜಿ ಸಿಎಂ ಹೇಳಿದ್ದೇನು? : ರಾಜ್ಯದ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ, ವರುಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಆರೋಪಿಸಿದ್ದರು. ‘‘ಚುನಾವಣಾ ಪ್ರಚಾರ ಸಮಯದಲ್ಲಿ ಕಾಂಗ್ರೆಸ್‌ನಲ್ಲಿ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಈಗಿರುವ ಲಿಂಗಾಯತ ಮುಖ್ಯಮಂತ್ರಿ ಮಾಡಿರುವ ಭ್ರಷ್ಟಾಚಾರ ಸಾಕಲ್ಲವೇ,’’ ಎಂದು ದೂರಿದ್ದರು.

lokesh

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

2 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

3 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

3 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

3 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

3 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

3 hours ago