ಬೆಂಗಳೂರು : ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ ಎಂದರು.
ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ ಎಂದರು.
ಮಾಜಿ ಸಿಎಂ ಹೇಳಿದ್ದೇನು? : ರಾಜ್ಯದ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ, ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಆರೋಪಿಸಿದ್ದರು. ‘‘ಚುನಾವಣಾ ಪ್ರಚಾರ ಸಮಯದಲ್ಲಿ ಕಾಂಗ್ರೆಸ್ನಲ್ಲಿ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಈಗಿರುವ ಲಿಂಗಾಯತ ಮುಖ್ಯಮಂತ್ರಿ ಮಾಡಿರುವ ಭ್ರಷ್ಟಾಚಾರ ಸಾಕಲ್ಲವೇ,’’ ಎಂದು ದೂರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…