BREAKING NEWS

ಪೆಪ್ಪರ್‌ಫ್ರೈ ಸಹ ಸಂಸ್ಥಾಪಕ ಅಂಬರೀಶ್‌ ಮೂರ್ತಿ ನಿಧನ

ಪೀಠೋಪಕರಣಗಳು ಮತ್ತು ಗೃಹಾಲಂಕಾರಕ ವಸ್ತುಗಳ ಆನ್‌ಲೈನ್‌ ಮಾರಾಟ ತಾಣ ಪೆಪ್ಪರ್‌ಫ್ರೈನ ಸಹ-ಸಂಸ್ಥಾಪಕ ಅಂಬರೀಶ್ ಮೂರ್ತಿ ನಿಧನರಾಗಿದ್ದಾರೆ. ಕಂಪನಿಯ ಇನ್ನೋರ್ವ ಸಹ-ಸಂಸ್ಥಾಪಕ ಆಶಿಶ್ ಷಾ ಅವರು ‘ಎಕ್ಸ್‌’ನಲ್ಲಿ ಈ ವಿಷಯ ತಿಳಿಸಿದ್ದಾರೆ.

ಲೇಹ್‌ನಲ್ಲಿ ಹೃದಯ ಸ್ತಂಭನದಿಂದಾಗಿ ತಮ್ಮ ಸ್ನೇಹಿತ, ಮಾರ್ಗದರ್ಶಕ, ಸಹೋದರ ನಿಧನರಾಗಿದ್ದಾರೆ ಎಂದು ಆಶಿಶ್‌ ಶಾ ತಿಳಿಸಿದ್ದಾರೆ. ಅಂಬರೀಶ್‌ ಮೂರ್ತಿ ಅವರಿಗೆ 51 ವರ್ಷ ವಯಸ್ಸಾಗಿತ್ತು. ಬೈಕ್ ಉತ್ಸಾಹಿಯಾಗಿದ್ದ ಅವರು ಮುಂಬೈನಿಂದ ಲೇಹ್‌ಗೆ ಬೈಕ್‌ನಲ್ಲಿ ಪ್ರವಾಸ ಹೋಗಿದ್ದರು. ಈ ವೇಳೆ ಅಲ್ಲೇ ಹೃದಯ ಸ್ಥಂಭನಕ್ಕೆ ಒಳಗಾಗಿ ಅಸುನೀಗಿದ್ದಾರೆ.

2011ರಲ್ಲಿ ಅವರು ಪೆಪ್ಪರ್‌ಫ್ರೈ ಅನ್ನು ಸ್ಥಾಪಿಸಿದ್ದರು. ಮತ್ತು ಇದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿದ್ದರು. “ನಿನ್ನೆ ರಾತ್ರಿ ಲೇಹ್‌ನಲ್ಲಿ ಹೃದಯ ಸ್ತಂಭನದಿಂದ ಅಂಬರೀಶ್‌ ಮೂರ್ತಿ ಅವರನ್ನು ಕಳೆದುಕೊಂಡೆ. ದಯವಿಟ್ಟು ಅವರಿಗಾಗಿ ಮತ್ತು ಅವರ ಕುಟುಂಬ ಮತ್ತು ಬಂಧುಗಳಿಗಾಗಿ ಪ್ರಾರ್ಥಿಸಿ,” ಎಂದು ಆಶಿಶ್‌ ಶಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಅವರ ಆತ್ಮೀಯರು, ಕಂಪನಿ ಉದ್ಯೋಗಿಗಳು ಅಂಬರೀಶ್‌ ಮೂರ್ತಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಲಡಾಖ್‌ ಪ್ರವಾಸಕ್ಕೆ ತೆರಳಿದ್ದ ಅಂಬರೀಶ್‌ ಮೂರ್ತಿ ಅವರು ತಮ್ಮ ಪ್ರವಾಸದ ಫೋಟೋಗಳು ಮತ್ತು ವಿಡಿಯೋಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದರು.

ಕ್ರಂಚ್‌ಬೇಸ್ ಪ್ರಕಾರ ಅಂಬರೀಶ್‌ ಮೂರ್ತಿ ಅವರು ಅಡೋನಿಯಾ ಹಾಸ್ಪಿಟಾಲಿಟಿ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದರು. ಅವರು 1996ರಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕೊಲ್ಕತ್ತಾದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ (ಎಂಬಿಎ) ಸ್ನಾತಕೋತ್ತರ ಪದವಿ ಪಡೆದಿದ್ದರು.

ಉದ್ಯಮಶೀಲತೆಯ ಬಗ್ಗೆ ಆರಂಭದಿಂದಲೂ ಆಸಕ್ತರಾಗಿದ್ದ ಅಂಬರೀಶ್‌ ಮೂರ್ತಿಯವರು ಪದವಿ ಓದುವ ವೇಳೆ ಮನೆಯಲ್ಲಿ ಟ್ಯೂಷನ್ ನೀಡಲು ಪ್ರಾರಂಭಿಸಿದ್ದರು. ಅವರು ಟ್ಯೂಟರ್ಸ್ ಬ್ಯೂರೋ ಎಂಬ ಸಣ್ಣ ಉದ್ಯಮವನ್ನೂ ಸ್ಥಾಪಿಸಿದ್ದರು. ಇದು ಶಾಲಾ ವಿದ್ಯಾರ್ಥಿಗಳೊಂದಿಗೆ ಬೋಧಕರನ್ನು ಸಂಪರ್ಕಿಸುವ ವ್ಯವಸ್ಥೆಯಾಗಿತ್ತು, ಅವರು 1990ರ ದಶಕದ ಆರಂಭದಲ್ಲಿ ಎರಡು ವರ್ಷಗಳ ಕಾಲ ಈ ಉದ್ಯಮವನ್ನು ನಡೆಸಿದ್ದರು.

ನಂತರ ಅವರು ಸ್ಥಾಪಿಸಿದ್ದೇ ಪೆಪ್ಪರ್‌ಫ್ರೈ. ಇದು ಸುಮಾರು 500 ಮಿಲಿಯನ್ ಡಾಲರ್‌ (ಸುಮಾರು 4,150 ಕೋಟಿ ರೂ.) ಮೌಲ್ಯದ್ದಾಗಿದೆ. 2020ರ ಹೊತ್ತಿಗೆ ಇದು ಎಂಟು ಸುತ್ತುಗಳಲ್ಲಿ 244 ಮಿಲಿಯನ್ ಡಾಲರ್‌ (2,000 ಕೋಟಿ ರೂ.) ಹೂಡಿಕೆ ಸಂಗ್ರಹಿಸಿತ್ತು. ಕಂಪನಿಯ ಹೂಡಿಕೆದಾರರಲ್ಲಿ ಗೋಲ್ಡ್‌ಮನ್ ಸ್ಯಾಚ್ಸ್ ಮತ್ತು ಬರ್ಟೆಲ್ಸ್‌ಮನ್ ಇಂಡಿಯಾ ಇನ್ವೆಸ್ಟ್‌ಮೆಂಟ್‌ಗಳು ಸೇರಿವೆ.

andolanait

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

3 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

3 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

3 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

3 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

4 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

4 hours ago