BREAKING NEWS

ನಾಪತ್ತೆಯಾಗಿದ್ದ ಇಬ್ಬರು ಮಣಿಪುರ ವಿದ್ಯಾರ್ಥಿಗಳ ಶವದ ಫೋಟೋಗಳು ವೈರಲ್

ನವದೆಹಲಿ : ಮಣಿಪುರ ಹಿಂಸಾಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಆಗಾಗ ಹಿಂಸಾಚಾರ, ಹತ್ಯೆಯ ಪ್ರಕರಣಗಳು ವರದಿಯಾಗುತ್ತಲೇ ಇವೆ. ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ತೋರಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಂಚಲನ ಮೂಡಿಸಿದೆ.

ಇಬ್ಬರು ವಿದ್ಯಾರ್ಥಿಗಳ ಶವಗಳಿರುವ ಫೋಟೋ ವೈರಲ್‌ ಆಗಿದೆ. ಇಬ್ಬರ ಪೈಕಿ ಒಬ್ಬಾಕೆ ಅಪ್ರಾಪ್ತೆ. ಶವಗಳು ಪತ್ತೆಯಾಗಿಲ್ಲ. ಹತ್ಯೆಗೂ ಮುನ್ನ ಅತ್ಯಾಚಾರ ನಡೆಸಲಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಸಂಬಂಧ ತನಿಖೆ ನಡೆಸುತ್ತಿದೆ.

ವೈರಲ್‌ ಆದ ಫೋಟೋದಲ್ಲಿ 17 ವರ್ಷದ ಹುಡುಗಿ ಮತ್ತು 20 ವರ್ಷದ ಯುವಕ ಇದ್ದಾರೆ. ಶಸ್ತ್ರ ಸಜ್ಜಿತ ಗುಂಪು ಇವರಿಬ್ಬರ ಹಿಂದೆ ನಿಂತಿದೆ. ಹುಡುಗಿ ಬಿಳಿ ಟಿ-ಶರ್ಟ್‌ನಲ್ಲಿದ್ದಾಳೆ. ಯುವಕ ಚೆಕ್ಡ್ ಶರ್ಟ್‌ನಲ್ಲಿದ್ದಾನೆ. ಅವರ ಹಿಂದೆ ಬಂದೂಕುಗಳನ್ನು ಹಿಡಿದ ಇಬ್ಬರು ವ್ಯಕ್ತಿಗಳು ನಿಂತಿದ್ದಾರೆ.

ಮತ್ತೊಂದು ಫೋಟೋದಲ್ಲಿ ಅವರ ಮೃತದೇಹಗಳು ನೆಲದ ಮೇಲೆ ಬಿದ್ದಿವೆ. ಚುರಚಂದಪುರದಿಂದ 35 ಕಿ.ಮೀ ದೂರದಲ್ಲಿರುವ ಬಿಷ್ಣುಪುರ ಜಿಲ್ಲೆಯಲ್ಲಿ ಇವರಿಬ್ಬರು ಕೊನೆಯದಾಗಿ ಕಾಣಿಸಿಕೊಂಡಿದ್ದರು. ಈ ಎರಡು ಜಿಲ್ಲೆಗಳ ನಡುವಿನ ಪ್ರದೇಶದಿಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ವಿದ್ಯಾರ್ಥಿಗಳನ್ನು ಅಪಹರಿಸಿ ಚುರಚಂದಪುರಕ್ಕೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಜುಲೈನಲ್ಲಿ ಈ ವಿದ್ಯಾರ್ಥಿಗಳು, ಅಂಗಡಿಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಈ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ಇಷ್ಟು ದಿನ ಬೇಕಾಯಿತು ಎಂದು ಹಲವರು ಪ್ರಶ್ನಿಸಿದ್ದಾರೆ.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago