Mysore
28
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಹೊಸ ಪಕ್ಷ ಸ್ಥಾಪನೆ ನಿರ್ಧಾರದಿಂದ ಹಿಂದೆ ಸರಿದ ಪೈಲಟ್

ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಧ್ವನಿ ದುರ್ಬಲವಾಗಿಲ್ಲ, ನಾನು ಹಿಂದೆ ಸರಿಯುವುದಿಲ್ಲ, ರಾಷ್ಟ್ರಕ್ಕೆ ಸತ್ಯದ ರಾಜಕೀಯ ಬೇಕು, ಜನರು ಭವಿಷ್ಯದ ಜೊತೆ ಆಟವಾಡುವುದನ್ನು ನಾನು ಬಯಸುವುದಿಲ್ಲ. ಯುವಕರ, ನನ್ನ ನೀತಿ ಸ್ಪಷ್ಟವಾಗಿದೆ, ನನಗೆ ಶುದ್ಧ ರಾಜಕಾರಣ ಬೇಕು ಎಂದು ತಿಳಿಸಿದರು.

ರಾಜಸ್ಥಾನದಲ್ಲಿ ಚುನಾವಣೆಗೆ ಆರು ತಿಂಗಳು ಬಾಕಿ ಇರುವಾಗ ಹೊಸ ಪಕ್ಷವನ್ನು ಪ್ರಾರಂಭಿಸಬಹುದು ಎಂಬ ಊಹಾಪೋಹವನ್ನು ನಿರಾಕರಿಸಿದ ಅವರು, ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪೈಲಟ್ ತಮ್ಮದೇ ಪಕ್ಷವನ್ನು ಘೋಷಿಸಬಹುದು ಎಂಬ ವದಂತಿಗಳನ್ನು ತಳ್ಳಿಹಾಕಿದರು ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ಪ್ರತಿಪಾದಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!