ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಧ್ವನಿ ದುರ್ಬಲವಾಗಿಲ್ಲ, ನಾನು ಹಿಂದೆ ಸರಿಯುವುದಿಲ್ಲ, ರಾಷ್ಟ್ರಕ್ಕೆ ಸತ್ಯದ ರಾಜಕೀಯ ಬೇಕು, ಜನರು ಭವಿಷ್ಯದ ಜೊತೆ ಆಟವಾಡುವುದನ್ನು ನಾನು ಬಯಸುವುದಿಲ್ಲ. ಯುವಕರ, ನನ್ನ ನೀತಿ ಸ್ಪಷ್ಟವಾಗಿದೆ, ನನಗೆ ಶುದ್ಧ ರಾಜಕಾರಣ ಬೇಕು ಎಂದು ತಿಳಿಸಿದರು.
ರಾಜಸ್ಥಾನದಲ್ಲಿ ಚುನಾವಣೆಗೆ ಆರು ತಿಂಗಳು ಬಾಕಿ ಇರುವಾಗ ಹೊಸ ಪಕ್ಷವನ್ನು ಪ್ರಾರಂಭಿಸಬಹುದು ಎಂಬ ಊಹಾಪೋಹವನ್ನು ನಿರಾಕರಿಸಿದ ಅವರು, ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಹೇಳಿದ್ದಾರೆ.
ಈ ಮಧ್ಯೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪೈಲಟ್ ತಮ್ಮದೇ ಪಕ್ಷವನ್ನು ಘೋಷಿಸಬಹುದು ಎಂಬ ವದಂತಿಗಳನ್ನು ತಳ್ಳಿಹಾಕಿದರು ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ಪ್ರತಿಪಾದಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…