BREAKING NEWS

ವಿಮಾನದ ಟಾಯ್ಲೆಟ್​ನಲ್ಲಿ ಕುಸಿದು ಬಿದ್ದು ಪೈಲಟ್ ಸಾವು : 271 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

ಮಿಯಾಮಿ : ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್​ನಲ್ಲಿ ಪೈಲಟ್​ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಾಣಿಜ್ಯ ವಿಮಾನದ ಟಾಯ್ಲೆಟ್​ನಲ್ಲಿ ಕುಸಿದುಬಿದ್ದು ಪೈಲಟ್ ಸಾವನ್ನಪ್ಪಿದ್ದಾರೆ.

ತಕ್ಷಣವೇ ವಿಮಾನವನ್ನು ಪನಾಮದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು, LATAM ಏರ್​ಲೈನ್ಸ್​ ವಿಮಾನ ಟೇಕ್ ಆಫ್ ಆದ ಮೂರು ಗಂಟೆಗಳ ನಂತರ ಸಾವನ್ನಪ್ಪಿದ್ದಾರೆ, ತಕ್ಷಣವೇ ಸಿಬ್ಬಂದಿ ತಿರ್ತು ಚಿಕಿತ್ಸೆ ನೀಡಿದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ವಿಮಾನವು ಪನಾಮ ಸಿಟಿಯ ಟೊಕುಮೆನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ, ವೈದ್ಯಕೀಯ ತಜ್ಞರು ಪೈಲಟ್ ಅನ್ನು ಪರೀಕ್ಷಿಸಲು ಧಾವಿಸಿದರು, ಆದರೆ ಅಷ್ಟೊರೊಳಗೆ ಅವರು ಮೃತಪಟ್ಟಿದ್ದರು.ಇವಾನ್ ಅವರು 25 ವರ್ಷಗಳ ಅನುಭವ ಹೊಂದಿರುವ ಅನುಭವಿ ಪೈಲಟ್ ಆಗಿದ್ದರು. ವಿಮಾನವು ಮಂಗಳವಾರ ಪನಾಮ ನಗರದಿಂದ ಹೊರಟು ಚಿಲಿಯ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಿತು.

ಇವಾನ್ ಅಂದೌರ್​ಗೆ 56 ವರ್ಷ, ಅವರ 25 ವರ್ಷಗಳ ಸೇವೆ, ಸಮರ್ಪಣೆ, ಅಮೂಲ್ಯ ಕೊಡುಗೆಗಾಗಿ ನಾವು ಕೃತಜ್ಞರಾಗಿದ್ದೇವೆ, ಹಾರಾಟದ ಸಮಯದಲ್ಲಿ ಪೈಲಟ್ ಜೀವ ಉಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

lokesh

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

2 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

4 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

10 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

10 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

11 hours ago