BREAKING NEWS

ವಿಮಾನದ ಟಾಯ್ಲೆಟ್​ನಲ್ಲಿ ಕುಸಿದು ಬಿದ್ದು ಪೈಲಟ್ ಸಾವು : 271 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

ಮಿಯಾಮಿ : ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್​ನಲ್ಲಿ ಪೈಲಟ್​ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಾಣಿಜ್ಯ ವಿಮಾನದ ಟಾಯ್ಲೆಟ್​ನಲ್ಲಿ ಕುಸಿದುಬಿದ್ದು ಪೈಲಟ್ ಸಾವನ್ನಪ್ಪಿದ್ದಾರೆ.

ತಕ್ಷಣವೇ ವಿಮಾನವನ್ನು ಪನಾಮದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು, LATAM ಏರ್​ಲೈನ್ಸ್​ ವಿಮಾನ ಟೇಕ್ ಆಫ್ ಆದ ಮೂರು ಗಂಟೆಗಳ ನಂತರ ಸಾವನ್ನಪ್ಪಿದ್ದಾರೆ, ತಕ್ಷಣವೇ ಸಿಬ್ಬಂದಿ ತಿರ್ತು ಚಿಕಿತ್ಸೆ ನೀಡಿದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ವಿಮಾನವು ಪನಾಮ ಸಿಟಿಯ ಟೊಕುಮೆನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ, ವೈದ್ಯಕೀಯ ತಜ್ಞರು ಪೈಲಟ್ ಅನ್ನು ಪರೀಕ್ಷಿಸಲು ಧಾವಿಸಿದರು, ಆದರೆ ಅಷ್ಟೊರೊಳಗೆ ಅವರು ಮೃತಪಟ್ಟಿದ್ದರು.ಇವಾನ್ ಅವರು 25 ವರ್ಷಗಳ ಅನುಭವ ಹೊಂದಿರುವ ಅನುಭವಿ ಪೈಲಟ್ ಆಗಿದ್ದರು. ವಿಮಾನವು ಮಂಗಳವಾರ ಪನಾಮ ನಗರದಿಂದ ಹೊರಟು ಚಿಲಿಯ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಿತು.

ಇವಾನ್ ಅಂದೌರ್​ಗೆ 56 ವರ್ಷ, ಅವರ 25 ವರ್ಷಗಳ ಸೇವೆ, ಸಮರ್ಪಣೆ, ಅಮೂಲ್ಯ ಕೊಡುಗೆಗಾಗಿ ನಾವು ಕೃತಜ್ಞರಾಗಿದ್ದೇವೆ, ಹಾರಾಟದ ಸಮಯದಲ್ಲಿ ಪೈಲಟ್ ಜೀವ ಉಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

lokesh

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

2 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

2 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

2 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago