ಮಿಯಾಮಿ : ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್ನಲ್ಲಿ ಪೈಲಟ್ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಾಣಿಜ್ಯ ವಿಮಾನದ ಟಾಯ್ಲೆಟ್ನಲ್ಲಿ ಕುಸಿದುಬಿದ್ದು ಪೈಲಟ್ ಸಾವನ್ನಪ್ಪಿದ್ದಾರೆ.
ತಕ್ಷಣವೇ ವಿಮಾನವನ್ನು ಪನಾಮದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು, LATAM ಏರ್ಲೈನ್ಸ್ ವಿಮಾನ ಟೇಕ್ ಆಫ್ ಆದ ಮೂರು ಗಂಟೆಗಳ ನಂತರ ಸಾವನ್ನಪ್ಪಿದ್ದಾರೆ, ತಕ್ಷಣವೇ ಸಿಬ್ಬಂದಿ ತಿರ್ತು ಚಿಕಿತ್ಸೆ ನೀಡಿದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ವಿಮಾನವು ಪನಾಮ ಸಿಟಿಯ ಟೊಕುಮೆನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ, ವೈದ್ಯಕೀಯ ತಜ್ಞರು ಪೈಲಟ್ ಅನ್ನು ಪರೀಕ್ಷಿಸಲು ಧಾವಿಸಿದರು, ಆದರೆ ಅಷ್ಟೊರೊಳಗೆ ಅವರು ಮೃತಪಟ್ಟಿದ್ದರು.ಇವಾನ್ ಅವರು 25 ವರ್ಷಗಳ ಅನುಭವ ಹೊಂದಿರುವ ಅನುಭವಿ ಪೈಲಟ್ ಆಗಿದ್ದರು. ವಿಮಾನವು ಮಂಗಳವಾರ ಪನಾಮ ನಗರದಿಂದ ಹೊರಟು ಚಿಲಿಯ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಿತು.
ಇವಾನ್ ಅಂದೌರ್ಗೆ 56 ವರ್ಷ, ಅವರ 25 ವರ್ಷಗಳ ಸೇವೆ, ಸಮರ್ಪಣೆ, ಅಮೂಲ್ಯ ಕೊಡುಗೆಗಾಗಿ ನಾವು ಕೃತಜ್ಞರಾಗಿದ್ದೇವೆ, ಹಾರಾಟದ ಸಮಯದಲ್ಲಿ ಪೈಲಟ್ ಜೀವ ಉಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…