BREAKING NEWS

ವಿಮಾನ ಪತನ : 14 ಜನರ ಸಾವು

ಬ್ರೆಜಿಲ್‍ : ವಿಮಾನವೊಂದು ಪತನಗೊಂಡು 14 ಜನ ಮೃತಪಟ್ಟ ಘಟನೆ ಬ್ರೆಜಿಲ್‍ನ ಜನಪ್ರಿಯ ಪ್ರವಾಸಿ ತಾಣವಾದ ಬಾರ್ಸಿಲೋಸ್‍ನಲ್ಲಿ ನಡೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ 12 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಎಂದು ತಿಳಿದು ಬಂದಿದೆ. ಭಾರೀ ಮಳೆ ಹಾಗೂ ಬಿರುಗಾಳಿಯ ನಡುವೆ ಪೈಲೆಟ್ ವಿಮಾನವನ್ನು ಇಳಿಸಲು ಪ್ರಯತ್ನಿಸಿದ್ದಾರೆ. ಇದರಿಂದಾಗಿ ಎದುರಿನ ರನ್ ವೇ ಪೈಲೆಟ್‍ಗೆ ಕಾಣಿಸದೆ ಮಧ್ಯದಲ್ಲಿ ವಿಮಾನ ಇಳಿದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬರದೆ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ಮೃತಪಟ್ಟವರನ್ನು ಅಮೆರಿಕ ಮೂಲದವರು ಎನ್ನಲಾಗಿತ್ತು. ಪರಿಶೀಲನೆಯ ಬಳಿಕ ಅವರೆಲ್ಲರು ಬ್ರೆಜಿಲ್‍ನ ಪ್ರಜೆಗಳು ಎಂದು ತಿಳಿದು ಬಂದಿದೆ. ಅವಘಡದ ಬಗ್ಗೆ ಬ್ರೆಜಿಲ್ ವಾಯುಪಡೆ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬಾರ್ಸಿಲೋಸ್‍ಗೆ ಆಗಮಿಸುತ್ತಿದ್ದ ಎರಡು ವಿಮಾನಗಳನ್ನು ಹವಾಮಾನದ ಕಾರಣದಿಂದಾಗಿ ಮನೌಸ್‍ಗೆ ವಾಪಸ್ ಕಳುಹಿಸಲಾಗಿದೆ. ಅಲ್ಲದೇ ಅವಘಡದಲ್ಲಿ ಸಾವನ್ನಪ್ಪಿದವರ ಮೃತ ದೇಹಗಳನ್ನು ಅವರ ಕುಟುಂಬಸ್ಥರಿಗೆ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಹೆಚ್ಚಿನ ಮಳೆಯ ಕಾರಣದಿಂದ ವಿಮಾನ ಸಂಚಾರಕ್ಕೆ ಅನುಮತಿ ಸಿಕ್ಕಿಲ್ಲ. ಅನುಮತಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಲ್ಲಿನ ವಾಯು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

21 mins ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

24 mins ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

26 mins ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

29 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸಂಸತ್ತಿನೊಳಗೆ ಪ್ರಧಾನಿಗೆ ‘ಬೆದರಿಕೆಯ ಗುಮ್ಮ

ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…

33 mins ago

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

3 hours ago