BREAKING NEWS

ವಿಮಾನ ಪತನ : 14 ಜನರ ಸಾವು

ಬ್ರೆಜಿಲ್‍ : ವಿಮಾನವೊಂದು ಪತನಗೊಂಡು 14 ಜನ ಮೃತಪಟ್ಟ ಘಟನೆ ಬ್ರೆಜಿಲ್‍ನ ಜನಪ್ರಿಯ ಪ್ರವಾಸಿ ತಾಣವಾದ ಬಾರ್ಸಿಲೋಸ್‍ನಲ್ಲಿ ನಡೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ 12 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಎಂದು ತಿಳಿದು ಬಂದಿದೆ. ಭಾರೀ ಮಳೆ ಹಾಗೂ ಬಿರುಗಾಳಿಯ ನಡುವೆ ಪೈಲೆಟ್ ವಿಮಾನವನ್ನು ಇಳಿಸಲು ಪ್ರಯತ್ನಿಸಿದ್ದಾರೆ. ಇದರಿಂದಾಗಿ ಎದುರಿನ ರನ್ ವೇ ಪೈಲೆಟ್‍ಗೆ ಕಾಣಿಸದೆ ಮಧ್ಯದಲ್ಲಿ ವಿಮಾನ ಇಳಿದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬರದೆ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ಮೃತಪಟ್ಟವರನ್ನು ಅಮೆರಿಕ ಮೂಲದವರು ಎನ್ನಲಾಗಿತ್ತು. ಪರಿಶೀಲನೆಯ ಬಳಿಕ ಅವರೆಲ್ಲರು ಬ್ರೆಜಿಲ್‍ನ ಪ್ರಜೆಗಳು ಎಂದು ತಿಳಿದು ಬಂದಿದೆ. ಅವಘಡದ ಬಗ್ಗೆ ಬ್ರೆಜಿಲ್ ವಾಯುಪಡೆ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬಾರ್ಸಿಲೋಸ್‍ಗೆ ಆಗಮಿಸುತ್ತಿದ್ದ ಎರಡು ವಿಮಾನಗಳನ್ನು ಹವಾಮಾನದ ಕಾರಣದಿಂದಾಗಿ ಮನೌಸ್‍ಗೆ ವಾಪಸ್ ಕಳುಹಿಸಲಾಗಿದೆ. ಅಲ್ಲದೇ ಅವಘಡದಲ್ಲಿ ಸಾವನ್ನಪ್ಪಿದವರ ಮೃತ ದೇಹಗಳನ್ನು ಅವರ ಕುಟುಂಬಸ್ಥರಿಗೆ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಹೆಚ್ಚಿನ ಮಳೆಯ ಕಾರಣದಿಂದ ವಿಮಾನ ಸಂಚಾರಕ್ಕೆ ಅನುಮತಿ ಸಿಕ್ಕಿಲ್ಲ. ಅನುಮತಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಲ್ಲಿನ ವಾಯು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago