BREAKING NEWS

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿಯಾಗಿದೆ.

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು ರೂಪಿಸಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದ್ದು ಸಿಬ್ಬಂದಿ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

ಜುಲೈ 12, 2022 ರಂದು ಬಿಹಾರದ ಪಾಟ್ನಾದಲ್ಲಿ ನಡೆದ ರ್ಯಾಲಿಯಲ್ಲಿ ಈಗ ನಿಷೇಧಿತ ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಹಲ್ಲೆ ನಡೆಸಲು ಯೋಜನೆ ರೂಪಿಸಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗುತ್ತಿದೆ.

ನಾಲ್ವರು ವಶಕ್ಕೆ : ದಾಳಿ ಬಳಿಕ ಶಂಕೆಯ ಹಿನ್ನೆಲೆಯಲ್ಲಿ ನಾಲ್ವರನ್ನು ಎನ್ಐಎ ಅಧಿಕಾರಿಗಳು ಪುತ್ತೂರು ತಾಲ್ಲೂಕಿನ ಮೂರು ಕಡೆಗಳಲ್ಲಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಐಎನ್ಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬುವವನನ್ನು ಬಂಧಿಸಿದ್ದರು. ತಮ್ಮ ಕುಕೃತ್ಯಕ್ಕೆ ಸಂಚು ನಡೆಸಲು ದಕ್ಷಿಣ ಕನ್ನಡದಿಂದ ಹಣಕಾಸು ನೆರವು ನೀಡಲಾಗಿದೆ ಎಂಬ ಸತ್ಯ ತನಿಖೆ ವೇಳೆ ಬಹಿರಂಗವಾಗಿತ್ತು. ಈ ಹಣದ ಜಾಡು ಹಿಡಿದು ಹೊರಟ ಅಧಿಕಾರಿಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದ್ದು, ಇದನ್ನು ಭಾರತದಲ್ಲಿ ಭಯೋತ್ಪಾದನೆ ಎಸಗಲು ಬಳಸಲಾಗುತ್ತಿದೆ ಎಂಬ ಅಂಶವನ್ನು ಪತ್ತೆಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎನ್ಐಎ ಅಧಿಕಾರಿಗಳು ಮತ್ತೆ ದಕ್ಷಿಣ ಕನ್ನಡದ ಹಲವು ಕಡೆ ದಾಳಿ ಮಾಡಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ NIA ಅಧಿಕಾರಿಗಳು: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

lokesh

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

9 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

12 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

16 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago