BREAKING NEWS

ಚೆನ್ನೈ ಏರ್‌ಪೋರ್ಟ್‌ನಲ್ಲಿ ಅತ್ಯಾಧುನಿಕ ಟರ್ಮಿನಲ್‌ಗೆ ಪ್ರಧಾನಿ ಚಾಲನೆ

ಚೆನ್ನೈ: ಎರಡು ದಿನಗಳ ದಕ್ಷಿಣ ಭಾರತ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್‌ನ ಮೊದಲ ಹಂತದ ಕಟ್ಟಡವನ್ನು ಉದ್ಘಾಟಿಸಿದರು.

ಅತ್ಯಾಕರ್ಷಕವಾಗಿ ನಿರ್ಮಿಸಲಾಗಿರುವ ಈ ಇಂಟಿಗ್ರೇಟೆಡ್ ಟರ್ಮಿನಲ್‌ನ ಮೊದಲ ಹಂತಕ್ಕೆ 1,250 ಕೋಟಿ ರೂ ವೆಚ್ಚವಾಗಿದೆ. “ಇದು ಚೆನ್ನೈನ ಮೂಲಸೌಕರ್ಯಕ್ಕೆ ಮಹತ್ವವಾದ ಸೇರ್ಪಡೆಯಾಗಿದೆ. ಇದು ಸಂಪರ್ಕವನ್ನು ವೃದ್ಧಿಸುತ್ತದೆ ಮತ್ತು ಸ್ಥಳೀಯ ಆರ್ಥಿಕತೆಗೆ ಕೂಡ ಅನುಕೂಲ ಮಾಡಿಕೊಡಲಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಟಿ-2 (ಎರಡನೇ ಹಂತ) ಕಟ್ಟಡವು ವಿಮಾನ ನಿಲ್ದಾಣದ ಪ್ರಯಾಣಿಕರ ಸಾಮರ್ಥ್ಯವನ್ನು ವರ್ಷಕ್ಕೆ 23 ಮಿಲಿಯನ್‌ನಿಂದ 30 ಮಿಲಿಯನ್‌ಗೆ ಹೆಚ್ಚಿಸುವ ನಿರೀಕ್ಷೆ ಇದೆ. ಇದರಲ್ಲಿ 100 ಚೆಕ್ ಇನ್ ಕೌಂಟರ್‌ಗಳು, 108 ವಲಸೆ ಕೌಂಟರ್‌ಗಳು, 17 ಎಸ್ಕಲೇಟರ್‌ಗಳು ಮತ್ತು 17 ಎಲಿವೇಟರ್‌ಗಳಿವೆ.

ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಸುಮಾರು 2.20 ಲಕ್ಷ ಚದರ ಮೀಟರ್ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ವಾಯು ಸಂಚಾರ ದಟ್ಟಣೆ ನಿರ್ವಹಿಸಲು ಇದು ನೆರವಾಗಲಿದೆ.

ಟರ್ಮಿನಲ್‌ನಲ್ಲಿ ಒಟ್ಟು 108 ವಲಸೆ ತಪಾಸಣಾ ಕೇಂದ್ರಗಳಿದ್ದು, ಆಗಮನ ಹಾಗೂ ನಿರ್ಗಮನದ ವಲಸೆ ಪ್ರಯಾಣಿಕರಿಗಾಗಿ ಇವುಗಳನ್ನು ಸಮಾನವಾಗಿ ಹಂಚಿಕೆ ಮಾಡಲಾಗಿದೆ. ಇವು ಪ್ರಯಾಣಿಕರು ಬಹಳ ವೇಗವಾಗಿ ವಲಸೆ ಸಂಬಂಧ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ನೆರವಾಗುವುದರಿಂದ ಅವರ ಪ್ರಯಾಣ ಅನುಭವವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ

ಅತ್ಯಾಧುನಿಕ ಸೌಲಭ್ಯಗಳು ಹಾಗೂ ಆಕರ್ಷಕವಾಗಿ ವಿನ್ಯಾಸ ಹೊಂದಿರುವ ನೂತನ ಕಟ್ಟಡದಲ್ಲಿನ ಸಾಂಪ್ರದಾಯಿಕ ಕಲೆಗಳು ಗಮನ ಸೆಳೆಯುತ್ತವೆ. ದಕ್ಷಿಣ ಭಾರತದ ವಿಶಿಷ್ಟ ಕಲೆಗಳಲ್ಲಿ ಒಂದಾದ ರಂಗೋಲಿಯ ಕೋಲಂ ಮಾದರಿಯಂತಹ ಸಾಂಪ್ರದಾಯಿಕ ಚಿತ್ರಣಗಳನ್ನು ಹೊಂದಿದೆ. ಸೀರೆಗಳು, ದೇವಾಲಯಗಳು ಹಾಗೂ ನೈಸರ್ಗಿಕ ಸೊಬಗನ್ನು ಬಿಂಬಿಸುವ ಇತರೆ ಚಿತ್ರಗಳು ಕಣ್ಮನ ಸೆಳೆಯುತ್ತವೆ. ಆಧುನಿಕ ಮತ್ತು ಸಾಂಪ್ರದಾಯಿಕ ಅಂಶಗಳ ಮಿಶ್ರಣವು ಇಂಗಾಲದ ಅಸ್ತಿತ್ವವನ್ನು ತಗ್ಗಿಸುವ ಪರಿಸರ ಸ್ನೇಹಿ ತಂತ್ರಜ್ಞಾನವನ್ನು ಕೂಡ ಒಳಗೊಂಡಿದೆ.

ಕಟ್ಟಡದ ಒಳಗಿನ ಜಾಗಕ್ಕೆ ಬೆಳಕು ಹರಿಸಲು ಮತ್ತು ವಿದ್ಯುತ್ ಬಳಕೆಯನ್ನು ತಗ್ಗಿಸಲು ನೈಸರ್ಗಿಕ ಬೆಳಕನ್ನು ಉಪಯೋಗಿಸುವ ಸ್ಕೈಲೈಟ್ ಇಲ್ಲಿನ ಮತ್ತೊಂದು ಪ್ರಮುಖ ಅಂಶವಾಗಿದೆ.

ಕ್ಯಾರಿ ಬ್ಯಾಗೇಜ್‌ಗಳಿಗಾಗಿ 11 ಸ್ವಯಂಚಾಲಿತ ಟ್ರೇ ರಿಟ್ರೈವಲ್ ಸಿಸ್ಟಂ (ಎಟಿಆರ್‌ಎಸ್), 33 ರಿಮೋಟ್ ಬೋರ್ಡಿಂಗ್ ಗೇಟ್‌ಗಳು ಇದ್ದು, ಭದ್ರತಾ ತಪಾಸಣಾ ಪ್ರಕ್ರಿಯೆ ಸರಾಗವಾಗಿ ನಡೆಯಲು ನೆರವಾಗಲಿದೆ.

andolanait

Recent Posts

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

14 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

5 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

6 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

6 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

6 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

6 hours ago