ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ.
ಭಾರತೀಯ ಆರ್ಥಿಕತೆಯು ಜಿಡಿಪಿಯಲ್ಲಿ ವರ್ಷಕ್ಕೆ ಕನಿಷ್ಠ 10 ಪ್ರತಿಶತದಷ್ಟು ಬೆಳೆಯುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ನಿರುದ್ಯೋಗವನ್ನು ಕೊನೆಗೊಳಿಸಬಹುದು ಮತ್ತು 10 ವರ್ಷಗಳಲ್ಲಿ ಬಡತನವನ್ನು ತೊಡೆದು ಹಾಕಬಹುದಾಗಿದೆ.
https://twitter.com/Swamy39/status/1669881974197026820?s=20
ಆದರೆ ಹಣಕಾಸು ಸಚಿವಾಲಯಕ್ಕೆ ಇದರ ಸುಳಿವಿಲ್ಲ. ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ಟ್ವೀಟ್ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಕೂಡ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸರ್ಕಾರದ ಬಜೆಟ್ ಸೇರಿದಂತ ಹಲವು ವಿಚಾರಗಳಲ್ಲಿ ಹಣಕಾಸು ಸಚಿವಾಲಯದ ನಡೆಯನ್ನು ಟೀಕಿಸಿದ್ದರು.
ಅಲ್ಲದೇ, ಲೋಕಸಭೆಯ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಾಗ ದೇಶ-ವಿದೇಶದ ರಾಜಕಾರಣಿಗಳು, ಚಿಂತಕರು ಸೇರಿದಂತೆ ಅಮೇರಿಕಾವ ವಿದೇಶಾಂಗ ಇಲಾಖೆಯೂ ಅನರ್ಹತೆ ಕುರಿತು ಖಂಡಿಸಿತ್ತು. ಆಗ ಸುಬ್ರಮಣಿಯನ್ ಸ್ವಾಮಿ, ಸರ್ಕಾರದ ಕ್ರಮವನ್ನು ಅಮೆರಿಕ ವಿದೇಶಾಂಗ ಇಲಾಖೆ ಖಂಡಿಸಿದೆ. ಇದಕ್ಕೆ ಮೋದಿ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದ್ದರು.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…