BREAKING NEWS

ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ: ಬಿಜೆಪಿ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ.

ಭಾರತೀಯ ಆರ್ಥಿಕತೆಯು ಜಿಡಿಪಿಯಲ್ಲಿ ವರ್ಷಕ್ಕೆ ಕನಿಷ್ಠ 10 ಪ್ರತಿಶತದಷ್ಟು ಬೆಳೆಯುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ನಿರುದ್ಯೋಗವನ್ನು ಕೊನೆಗೊಳಿಸಬಹುದು ಮತ್ತು 10 ವರ್ಷಗಳಲ್ಲಿ ಬಡತನವನ್ನು ತೊಡೆದು ಹಾಕಬಹುದಾಗಿದೆ.

https://twitter.com/Swamy39/status/1669881974197026820?s=20

ಆದರೆ ಹಣಕಾಸು ಸಚಿವಾಲಯಕ್ಕೆ ಇದರ ಸುಳಿವಿಲ್ಲ. ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ಟ್ವೀಟ್​ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಟ್ವೀಟ್​ ಮಾಡಿದ್ದಾರೆ. ಈ ಹಿಂದೆ ಕೂಡ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸರ್ಕಾರದ ಬಜೆಟ್ ಸೇರಿದಂತ ಹಲವು ವಿಚಾರಗಳಲ್ಲಿ ಹಣಕಾಸು ಸಚಿವಾಲಯದ ನಡೆಯನ್ನು​ ಟೀಕಿಸಿದ್ದರು.

ಅಲ್ಲದೇ, ಲೋಕಸಭೆಯ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಾಗ ದೇಶ-ವಿದೇಶದ ರಾಜಕಾರಣಿಗಳು, ಚಿಂತಕರು ಸೇರಿದಂತೆ ಅಮೇರಿಕಾವ ವಿದೇಶಾಂಗ ಇಲಾಖೆಯೂ ಅನರ್ಹತೆ ಕುರಿತು ಖಂಡಿಸಿತ್ತು. ಆಗ ಸುಬ್ರಮಣಿಯನ್ ಸ್ವಾಮಿ, ಸರ್ಕಾರದ ಕ್ರಮವನ್ನು ಅಮೆರಿಕ ವಿದೇಶಾಂಗ ಇಲಾಖೆ ಖಂಡಿಸಿದೆ. ಇದಕ್ಕೆ ಮೋದಿ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದ್ದರು.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

5 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

6 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

6 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

7 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

7 hours ago