Mysore
29
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ.
ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ.

ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ ಸಂಚರಿಸುವ ಶತಾಬ್ದಿ ಎಕ್ಸ್‌ಪ್ರೆಸ್‌ಗಿಂತಲೂ ಒಂದು ತಾಸಿನಷ್ಟು ಕಡಿಮೆಯಾಗಲಿದೆ.

ಈ ರೈಲು 5 ತಾಸು 15 ನಿಮಿಷಗಳಲ್ಲಿ ಗಮ್ಯಸ್ಥಾನ ತಲುಪಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವಂದೇ ಭಾರತ್ ರೈಲಿನ ಚಾಲನೆಯೊಂದಿಗೆ ರಾಜಸ್ಥಾನದ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕದಲ್ಲಿ ಸುಧಾರಣೆಯಾಗಲಿದ್ದು, ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!