BREAKING NEWS

ವಂದೇ ಭಾರತ್‌ ಸೇರಿದಂತೆ 8 ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಶನಿವಾರ) ಅಯೋಧ್ಯೆಯ ಮರು ಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಅಯೋಧ್ಯೆ ವಿಮಾನ ನಿಲ್ದಾಣ, ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಉತ್ತರ ಪ್ರದೇಶದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪಿಎಂ ಶಂಕುಸ್ಥಾಪನೆ ಮಾಡಿದ್ದಾರೆ.

ರೈಲು ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ನರೈಲ್ವೆ ನಿಲ್ದಾಣ ಸೌಲಭ್ಯದ ವೀಕ್ಷಣೆ ನಡೆಸಿದರು. ಅವರರೊಂದಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತಿತರರು ಜೊತೆಯಾಗಿದ್ದರು.

https://x.com/airnewsalerts/status/1740986541282075066?s=20

ಮರು ಅಭಿವೃದ್ಧಿಗೊಂಡ ನಿಲ್ದಾಣದ ಹಂತ-1 240 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಪೂರ್ಣಗೊಂಡಿದೆ. ಈ ನಿಲ್ದಾಣ ಮೂರು ಅಂತಸ್ತಿನದ್ದಾಗಿದ್ದು, ರೈಲು ನಿಲ್ದಾಣದ ಕಟ್ಟಡ ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ಫುಡ್ ಪ್ಲಾಜಾಗಳು, ಪೂಜೆ ಸಮಾನುಗಳ ಅಂಗಡಿಗಳು, ಕ್ಲೋಕ್ ರೂಮ್‌ಗಳು, ಮಕ್ಕಳ ಆರೈಕೆ ಕೊಠಡಿಗಳು, ವೈಟಿಂಗ್ ರೂಂಗಳಂತಹ ವೈಶಿಷ್ಟ್ಯತೆಗಳಿಂದ ಕೂಡಿದೆ.

ಎರಡು ಅಮೃತ್ ಭಾರತ್ ರೈಲು: ದರ್ಬಾಂಗ್-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ನೂತನ ಆರು ವಂದೇ ಭಾರತ್ ರೈಲುಗಳಿಗೆ ಪಿಎಂ ಚಾಲನೆ: ಶ್ರೀ ಮಾತಾ ವೈಷ್ಣೋದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್, ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪಿಎಂ ಮೋದಿ ಚಾಲನೆ ಕೊಟ್ಟರು.

ಕರಾವಳಿ ಜಿಲ್ಲೆಯ ಬಹುದಿನದ ಬೇಡಿಕೆಯಾದ ಮಹಾನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ಮಂಗಳೂರು-ಮಡಗಾಂವ್ ವಂದೇ ಭಾರತ್ ಮತ್ತು ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್‌ ಮಾತನಾಡಿ, ದೇಶದಲ್ಲಿ ಸ್ವಾತಂತ್ರ್ಯ ಬಳಿಕ ಎರಡು ಯುಗಗಳು ಕಾಣುತ್ತಿದ್ದು, 2014 ರ ಬಳಿಕ ಪರಿವರ್ತನೆ ಯುಗ ಆರಂಭವಾಗಿದೆ. ರೈಲ್ವೆ ಇಲಾಖೆಯಲ್ಲಿ ಮಹತ್ತರ ಬದಲಾವಣೆಯಾಗಿದೆ ಎಂದರು.

https://x.com/nalinkateel/status/1740993232161661071?s=20

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago