BREAKING NEWS

ಇಸ್ರೆಲ್‌ ವಿರುದ್ಧ ಮತ ಚಲಾಯಿಸಿ ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ

ನವದೆಹಲಿ : ಪ್ಯಾಲೆಸ್ತೀನ್‌ ನಲ್ಲಿ ಇಸ್ಸ್ರೇಲ್‌ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅಕ್ರಮಿತ ಪ್ಯಾಲೆಸ್ತೀನ್‌ ಭೂಭಾಗ ಹಾಗೂ ಸಿರಿಯನ್‌ ಗೋಲನ್‌ನಲ್ಲಿ ಇಸ್ರೇಲ್‌ ವಸಾಹತು ಸ್ಥಾಪನೆ ಖಂಡಿಸುವ ಕುರಿತು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಭಾರತ ಸೇರಿ 145 ದೇಶಗಳು ನಿರ್ಣಯದ ಪರ ಮತ ಚಲಾವಣೆ ಮಾಡಿದವು. ಅಮೇರಿಕಾ ಕೆನಡಾ ಇಸ್ರೇಲ್‌ ಸೇರಿ 7 ದೇಶಗಳು ವಿರದ್ಧ ಮತ ಹಾಕಿದರೇ, 18 ರಾಷ್ಟ್ರಗಳು ತಟಸ್ಥ ಕಾಯ್ದುಕೊಂಡವು.

ಗಾಜಾ ಪಟ್ಟಿಯಲ್ಲಿ ತಕ್ಷಣ ದೀರ್ಘಕಾಲಿನ ಮಾನವೀಯ ವಿರಾಮ ಘೋಷಣೆ ಮಾಡಬೇಕು ಎಂದು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಇದು ಯುದ್ದ ನಿಲ್ಲಿಸುವ ಪರ ಇದ್ದರಿಂದ ಭಾಋತ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು. ಈಗ ಪ್ಯಾಲೆಸ್ತೀನ ಭೂಭಾಗದಲ್ಲಿ ವಸಹತು ಸ್ಥಾಪನೆ ಖಂಡನೆ ನಿರ್ಣಯ ಪರ ಮತ ಚಲಾಯಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಪ್ಯಾಲೆಸ್ತೀನ್ ಭೂಭಾಗದಲ್ಲಿ ಜಾಗ ಕಸಿಯುವುದು, ಸಂರಕ್ಷಿತ ಜನರ ಜೀವನೋಪಾಯಗಳನ್ನು ಅಸ್ತವ್ಯಸ್ತಗೊಳಿಸುವುದು, ಬಲವಂತವಾಗಿ ನಾಗರೀಕರನ್ನು ಸ್ಥಳಾಂತರಿಸುವುದು, ಜಾಗವನ್ನು ಕಬಳಿಸುವುದನ್ನು ಖಂಡಿಸುವ ಅಂಶಗಳು ಈ ನಿರ್ಣಯದಲ್ಲಿದೆ.

ಇಸ್ರೇಲ್‌ ಹಾಗೂ ಹಮಾಸ್‌ ನಡುವಿನ ಯುದ್ಧದಿಂದಾಗಿ ಗಾಜಾ ಪಟ್ಟಿನಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ, ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂಬುದು ವಿಶ್ವಸಂಸ್ಥೆಯ ಒತ್ತಾಯವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ಹಾಗೂ ಮಾನವ ಹಕ್ಕು ಸಂಘಟನೆಗಳ ಆಗ್ರಹವಾಗಿದೆ.

ನವದೆಹಲಿ : ಪ್ಯಾಲೆಸ್ತೀನ್‌ ನಲ್ಲಿ ಇಸ್ಸ್ರೇಲ್‌ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅಕ್ರಮಿತ ಪ್ಯಾಲೆಸ್ತೀನ್‌ ಭೂಭಾಗ ಹಾಗೂ ಸಿರಿಯನ್‌ ಗೋಲನ್‌ನಲ್ಲಿ ಇಸ್ರೇಲ್‌ ವಸಾಹತು ಸ್ಥಾಪನೆ ಖಂಡಿಸುವ ಕುರಿತು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಭಾರತ ಸೇರಿ 145 ದೇಶಗಳು ನಿರ್ಣಯದ ಪರ ಮತ ಚಲಾವಣೆ ಮಾಡಿದವು. ಅಮೇರಿಕಾ ಕೆನಡಾ ಇಸ್ರೇಲ್‌ ಸೇರಿ 7 ದೇಶಗಳು ವಿರದ್ಧ ಮತ ಹಾಕಿದರೇ, 18 ರಾಷ್ಟ್ರಗಳು ತಟಸ್ಥ ಕಾಯ್ದುಕೊಂಡವು.

ಗಾಜಾ ಪಟ್ಟಿಯಲ್ಲಿ ತಕ್ಷಣ ದೀರ್ಘಕಾಲಿನ ಮಾನವೀಯ ವಿರಾಮ ಘೋಷಣೆ ಮಾಡಬೇಕು ಎಂದು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಇದು ಯುದ್ದ ನಿಲ್ಲಿಸುವ ಪರ ಇದ್ದರಿಂದ ಭಾಋತ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು. ಈಗ ಪ್ಯಾಲೆಸ್ತೀನ ಭೂಭಾಗದಲ್ಲಿ ವಸಹತು ಸ್ಥಾಪನೆ ಖಂಡನೆ ನಿರ್ಣಯ ಪರ ಮತ ಚಲಾಯಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಪ್ಯಾಲೆಸ್ತೀನ್ ಭೂಭಾಗದಲ್ಲಿ ಜಾಗ ಕಸಿಯುವುದು, ಸಂರಕ್ಷಿತ ಜನರ ಜೀವನೋಪಾಯಗಳನ್ನು ಅಸ್ತವ್ಯಸ್ತಗೊಳಿಸುವುದು, ಬಲವಂತವಾಗಿ ನಾಗರೀಕರನ್ನು ಸ್ಥಳಾಂತರಿಸುವುದು, ಜಾಗವನ್ನು ಕಬಳಿಸುವುದನ್ನು ಖಂಡಿಸುವ ಅಂಶಗಳು ಈ ನಿರ್ಣಯದಲ್ಲಿದೆ.

ಇಸ್ರೇಲ್‌ ಹಾಗೂ ಹಮಾಸ್‌ ನಡುವಿನ ಯುದ್ಧದಿಂದಾಗಿ ಗಾಜಾ ಪಟ್ಟಿನಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ, ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂಬುದು ವಿಶ್ವಸಂಸ್ಥೆಯ ಒತ್ತಾಯವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ಹಾಗೂ ಮಾನವ ಹಕ್ಕು ಸಂಘಟನೆಗಳ ಆಗ್ರಹವಾಗಿದೆ.

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

11 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

11 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

11 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

12 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

12 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

13 hours ago