ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ʼʼ ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇʼʼ ಎಂದು ಹೇಳಿದ್ದಾರೆ.
ʼʼನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.ʼʼ ಎಂದು ಅವರು ತಿಳಿಸಿದ್ದಾರೆ.
ʼʼನರೇಂದ್ರ ಮೋದಿ ಅವರು ಇನ್ನೂ ಆರೆಸ್ಸೆಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ʼʼಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆʼʼ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…