BREAKING NEWS

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಕರೆ ಅತ್ಯಂತ ಪ್ರಚೋದನಕಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼ ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇʼʼ ಎಂದು ಹೇಳಿದ್ದಾರೆ.

ʼʼನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.ʼʼ ಎಂದು ಅವರು ತಿಳಿಸಿದ್ದಾರೆ.

ʼʼನರೇಂದ್ರ ಮೋದಿ ಅವರು ಇನ್ನೂ ಆರೆಸ್ಸೆಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ʼʼಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆʼʼ ಎಂದು ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

andolanait

Recent Posts

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

24 mins ago

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

46 mins ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

1 hour ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

2 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

2 hours ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

3 hours ago