BREAKING NEWS

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಕರೆ ಅತ್ಯಂತ ಪ್ರಚೋದನಕಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼ ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇʼʼ ಎಂದು ಹೇಳಿದ್ದಾರೆ.

ʼʼನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.ʼʼ ಎಂದು ಅವರು ತಿಳಿಸಿದ್ದಾರೆ.

ʼʼನರೇಂದ್ರ ಮೋದಿ ಅವರು ಇನ್ನೂ ಆರೆಸ್ಸೆಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ʼʼಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆʼʼ ಎಂದು ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago