BREAKING NEWS

ಶೌಚಾಲಯದಲ್ಲಿ ವಿಡಿಯೋ ಪ್ರಕರಣದಲ್ಲಿ ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ : ಖುಷ್ಬೂ ಸುಂದರ್

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಇನ್ನು ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು ಸೂಕ್ಷ್ಮ ವಿಚಾರವಾಗಿದ್ದು,ಯಾರು ಇದನ್ನು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

ಕಾಲೇಜಿನವರು ಪತ್ರಿಕಾಗೋಷ್ಠಿ ಮಾಡಿ ವಿಡಿಯೋ ಡಿಲೀಟ್ ಮಾಡಿರುವ ಬಗ್ಗೆ ಹೇಳಿದ್ದಾರೆ. ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುವವರು ಕಾನೂನು ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯ ಅವರನ್ನು ರಕ್ಷಣೆ ಮಾಡಬೇಕು. ನಾವು ಎಲ್ಲರೂ ಜವಾಬ್ದಾರಿಯಾಗಿ ವರ್ತಿಸಬೇಕು. ನಾನು ಯಾರನ್ನು ದೂಷಿಷಲು ಇಲ್ಲಿಗೆ ಬಂದಿಲ್ಲ. ನಾನು ಇಲ್ಲಿ ರಾಜಕಾರಣಿಯಾಗಿ ಬಂದಿಲ್ಲ. ಒಬ್ಬ ಮಹಿಳಾ ಆಯೋಗದ ಸದಸ್ಯೆಯಾಗಿ ಬಂದಿದ್ದೇನೆ. ಸಂತ್ರಸ್ತೆ ಹಾಗೂ ಆರೋಪಿಗಳನ್ನು ಭೇಟಿ ಮಾಡುತ್ತೇನೆ. ಅವರು ಯಾವ ಕಾರಣಕ್ಕೆ ವಿಡಿಯೋ ಮಾಡಿದ್ದಾರೆ, ಯಾರಾದರೂ ಹೇಳಿದಕ್ಕೆ ವಿಡಿಯೋ ಮಾಡಿದ್ದಾರಾ? ತಮಾಷೆಗೆ ವಿಡಿಯೋ ಮಾಡಿದ್ದ? ಈ ಬಗ್ಗೆ ಅವರಿಂದ ಮಾಹಿತಿ ಪಡೆಯುತ್ತೇನೆ. ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ . ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ತಿಳಿಸಿದರು.

lokesh

Recent Posts

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

30 mins ago

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…

59 mins ago

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…

1 hour ago

ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…

1 hour ago

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…

1 hour ago

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…

2 hours ago