ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಇನ್ನು ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು ಸೂಕ್ಷ್ಮ ವಿಚಾರವಾಗಿದ್ದು,ಯಾರು ಇದನ್ನು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.
ಕಾಲೇಜಿನವರು ಪತ್ರಿಕಾಗೋಷ್ಠಿ ಮಾಡಿ ವಿಡಿಯೋ ಡಿಲೀಟ್ ಮಾಡಿರುವ ಬಗ್ಗೆ ಹೇಳಿದ್ದಾರೆ. ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುವವರು ಕಾನೂನು ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.
ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯ ಅವರನ್ನು ರಕ್ಷಣೆ ಮಾಡಬೇಕು. ನಾವು ಎಲ್ಲರೂ ಜವಾಬ್ದಾರಿಯಾಗಿ ವರ್ತಿಸಬೇಕು. ನಾನು ಯಾರನ್ನು ದೂಷಿಷಲು ಇಲ್ಲಿಗೆ ಬಂದಿಲ್ಲ. ನಾನು ಇಲ್ಲಿ ರಾಜಕಾರಣಿಯಾಗಿ ಬಂದಿಲ್ಲ. ಒಬ್ಬ ಮಹಿಳಾ ಆಯೋಗದ ಸದಸ್ಯೆಯಾಗಿ ಬಂದಿದ್ದೇನೆ. ಸಂತ್ರಸ್ತೆ ಹಾಗೂ ಆರೋಪಿಗಳನ್ನು ಭೇಟಿ ಮಾಡುತ್ತೇನೆ. ಅವರು ಯಾವ ಕಾರಣಕ್ಕೆ ವಿಡಿಯೋ ಮಾಡಿದ್ದಾರೆ, ಯಾರಾದರೂ ಹೇಳಿದಕ್ಕೆ ವಿಡಿಯೋ ಮಾಡಿದ್ದಾರಾ? ತಮಾಷೆಗೆ ವಿಡಿಯೋ ಮಾಡಿದ್ದ? ಈ ಬಗ್ಗೆ ಅವರಿಂದ ಮಾಹಿತಿ ಪಡೆಯುತ್ತೇನೆ. ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ . ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…