ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ ಸಿದ್ದರಾಮಯ್ಯ ರನ್ನ ಸೋಲಿಸುವುದಾಗಿ ಪಣತೊಟ್ಟಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2016 ರಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪೊಲೀಸರು ಹೋರಾಟಕ್ಕೆ ಇಳಿದಿದ್ದರು.ಇದರ ಮುಂಚೂಣಿಯನ್ನ ಶಶಿಧರ್ ವಹಿಸಿದ್ದರು.ಹೋರಾಟ ಹತ್ತಿಕ್ಕಲು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಿ 84 ದಿನಗಳ ಕಾಲ ಜೈಲಿಗೆ ಕಳಿಸಿದ್ದ ಬಗ್ಗೆ ಉಲ್ಲೇಖಿಸಿರುವ ಶಶಿಧರ್ ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋಲನುಭವಿಸಿದಂತೆ ಈ ಬಾರಿಯೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲನುಭವಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೆ ಪೊಲೀಸರ ಪಾತ್ರ ಮಹತ್ತರವಾಗಿದೆ ಎಂದೂ ಸಹ ಉಲ್ಲೇಖವಾಗಿದೆ.
ಏ 18,2023 ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಪರಮೇಶ್ವರ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಭಿಯೋಜಕ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ರೋಚಕತೆ ಪಡೆಯಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…