BREAKING NEWS

ಸಿದ್ದರಾಮಯ್ಯ ಸೋಲಿಗೆ ಪೊಲೀಸರ ಸಂಕಲ್ಪ? : ಕರ್ನಾಟಕ ಪೊಲೀಸ್ ಮಹಾಸಂಘದಿಂದ ಅಚ್ಚರಿ ಪ್ರಕಟಣೆ

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ ಸಿದ್ದರಾಮಯ್ಯ ರನ್ನ ಸೋಲಿಸುವುದಾಗಿ ಪಣತೊಟ್ಟಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2016 ರಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪೊಲೀಸರು ಹೋರಾಟಕ್ಕೆ ಇಳಿದಿದ್ದರು.ಇದರ ಮುಂಚೂಣಿಯನ್ನ ಶಶಿಧರ್ ವಹಿಸಿದ್ದರು.ಹೋರಾಟ ಹತ್ತಿಕ್ಕಲು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಿ 84 ದಿನಗಳ ಕಾಲ ಜೈಲಿಗೆ ಕಳಿಸಿದ್ದ ಬಗ್ಗೆ ಉಲ್ಲೇಖಿಸಿರುವ ಶಶಿಧರ್ ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋಲನುಭವಿಸಿದಂತೆ ಈ ಬಾರಿಯೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲನುಭವಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೆ ಪೊಲೀಸರ ಪಾತ್ರ ಮಹತ್ತರವಾಗಿದೆ ಎಂದೂ ಸಹ ಉಲ್ಲೇಖವಾಗಿದೆ.

ಏ 18,2023 ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಪರಮೇಶ್ವರ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಭಿಯೋಜಕ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ರೋಚಕತೆ ಪಡೆಯಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

lokesh

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago