BREAKING NEWS

ಸಿದ್ದರಾಮಯ್ಯ ಸೋಲಿಗೆ ಪೊಲೀಸರ ಸಂಕಲ್ಪ? : ಕರ್ನಾಟಕ ಪೊಲೀಸ್ ಮಹಾಸಂಘದಿಂದ ಅಚ್ಚರಿ ಪ್ರಕಟಣೆ

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ ಸಿದ್ದರಾಮಯ್ಯ ರನ್ನ ಸೋಲಿಸುವುದಾಗಿ ಪಣತೊಟ್ಟಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2016 ರಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪೊಲೀಸರು ಹೋರಾಟಕ್ಕೆ ಇಳಿದಿದ್ದರು.ಇದರ ಮುಂಚೂಣಿಯನ್ನ ಶಶಿಧರ್ ವಹಿಸಿದ್ದರು.ಹೋರಾಟ ಹತ್ತಿಕ್ಕಲು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಿ 84 ದಿನಗಳ ಕಾಲ ಜೈಲಿಗೆ ಕಳಿಸಿದ್ದ ಬಗ್ಗೆ ಉಲ್ಲೇಖಿಸಿರುವ ಶಶಿಧರ್ ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋಲನುಭವಿಸಿದಂತೆ ಈ ಬಾರಿಯೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲನುಭವಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೆ ಪೊಲೀಸರ ಪಾತ್ರ ಮಹತ್ತರವಾಗಿದೆ ಎಂದೂ ಸಹ ಉಲ್ಲೇಖವಾಗಿದೆ.

ಏ 18,2023 ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಪರಮೇಶ್ವರ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಭಿಯೋಜಕ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ರೋಚಕತೆ ಪಡೆಯಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

18 hours ago