BREAKING NEWS

ತಮಿಳಿನ ಜನಪ್ರಿಯ ನಟ, ನಿರ್ದೇಶಕ ಮನೋಬಾಲಾ ನಿಧನ

ಚೆನ್ನೈ: ಕಾಲಿವುಡ್‌ ನಲ್ಲಿ ನಟ, ನಿರ್ದೇಶಕರಾಗಿ ಅಪಾರ ಖ್ಯಾತಿ ಗಳಸಿದ್ದ ಮನೋಬಾಲಾ (69) ಬುಧವಾರ (ಮೇ 3) ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲ ಸಮಯದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನದ ಸುದ್ದಿಯನ್ನು ನಟ-ನಿರ್ದೇಶಕ ಜಿಎಂ ಕುಮಾರ್ ಟ್ವಿಟರ್‌ ನಲ್ಲಿ ತಿಳಿಸಿದ್ದಾರೆ.

1979 ರಲ್ಲಿ ಭಾರತಿರಾಜ ಅವರ ʼಪುತಿಯ ವಾರ್ಪುಗಳ್ʼ ಚಿತ್ರದ ಮೂಲಕ ‌ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನೂರಕ್ಕೂ ಅಧಿಕ ಸಿನಿಮಾದಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು.

ಕಮಲ್ ಹಾಸನ್ ಅವರ ಸಲಹೆಯ ಮೇರೆಗೆ ಭಾರತಿರಾಜ ಅವರಡಿಯಲ್ಲಿ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಇದಾದ ಬಳಿಕ 1982 ರಲ್ಲಿ ʼಆಗಾಯ ಗಂಗೈʼ ಚಿತ್ರದ ಮೂಲಕ ಮೊದಲ ಬಾರಿ ತಮ್ಮ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದರು.

ʼಪಿಳ್ಳೈ ನಿಲಾʼ, ʼಊರ್ಕಾವಲನ್ʼ, ʼಎನ್ ಪುರುಷಾನ್ತನ್ ಎನಕ್ಕು ಮಟ್ಟುಮ್ತಾನ್ʼ, ʼಕರುಪ್ಪು ವೆಳ್ಳೈʼ, ʼಮಲ್ಲು ವೆಟ್ಟಿ ಮೈನರ್ʼ ʼಪಾರಂಬರಿಯಂʼ.. ಹೀಗೆ 25 ಸಿನಿಮಾಗಳನ್ನು ನಿರ್ದೇಶನ ಮಾಡಿ ಮಿಂಚಿದ್ದರು. ಸಿನಿಮಾ ಮಾತ್ರವಲ್ಲದೆ ಧಾರಾವಾಹಿಗಳಲ್ಲೂ ನಟಿಸಿ, ಕಿರುತೆರೆಯ ಕೆಲ ಧಾರಾವಾಹಿಗಳನ್ನೂ ನಿರ್ದೇಶಿಸಿದ್ದರು. ನಿರ್ಮಾಪಕರಾಗಿಯೂ ಇಂಡಸ್ಟ್ರಿಯಲ್ಲಿ ಹೆಸರು ಮಾಡಿದ್ದರು.

2022 ರಲ್ಲಿ ʼಕುಕು ವಿತ್ ಕೊಮಾಲಿʼ ಕಾರ್ಯಕ್ರಮದ ಸ್ಪರ್ಧಿಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು.

35 ವರ್ಷಗಳ ಸಿನಿ ಜರ್ನಿಯಲ್ಲಿ ಸುಮಾರು 450 ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅವರು,ಕಾಜಲ್ ಅಗರ್ವಾಲ್ ಅವರ ʼಘೋಸ್ಟಿʼ ಚಿತ್ರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

ಪತ್ನಿ ಮತ್ತು ಮಗನನ್ನು ಅವರು ಅಗಲಿದ್ದಾರೆ.

 

andolanait

Recent Posts

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

42 mins ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

2 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

3 hours ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

6 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

6 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

6 hours ago