BREAKING NEWS

ತಮಿಳಿನ ಜನಪ್ರಿಯ ನಟ, ನಿರ್ದೇಶಕ ಮನೋಬಾಲಾ ನಿಧನ

ಚೆನ್ನೈ: ಕಾಲಿವುಡ್‌ ನಲ್ಲಿ ನಟ, ನಿರ್ದೇಶಕರಾಗಿ ಅಪಾರ ಖ್ಯಾತಿ ಗಳಸಿದ್ದ ಮನೋಬಾಲಾ (69) ಬುಧವಾರ (ಮೇ 3) ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲ ಸಮಯದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನದ ಸುದ್ದಿಯನ್ನು ನಟ-ನಿರ್ದೇಶಕ ಜಿಎಂ ಕುಮಾರ್ ಟ್ವಿಟರ್‌ ನಲ್ಲಿ ತಿಳಿಸಿದ್ದಾರೆ.

1979 ರಲ್ಲಿ ಭಾರತಿರಾಜ ಅವರ ʼಪುತಿಯ ವಾರ್ಪುಗಳ್ʼ ಚಿತ್ರದ ಮೂಲಕ ‌ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನೂರಕ್ಕೂ ಅಧಿಕ ಸಿನಿಮಾದಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು.

ಕಮಲ್ ಹಾಸನ್ ಅವರ ಸಲಹೆಯ ಮೇರೆಗೆ ಭಾರತಿರಾಜ ಅವರಡಿಯಲ್ಲಿ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಇದಾದ ಬಳಿಕ 1982 ರಲ್ಲಿ ʼಆಗಾಯ ಗಂಗೈʼ ಚಿತ್ರದ ಮೂಲಕ ಮೊದಲ ಬಾರಿ ತಮ್ಮ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದರು.

ʼಪಿಳ್ಳೈ ನಿಲಾʼ, ʼಊರ್ಕಾವಲನ್ʼ, ʼಎನ್ ಪುರುಷಾನ್ತನ್ ಎನಕ್ಕು ಮಟ್ಟುಮ್ತಾನ್ʼ, ʼಕರುಪ್ಪು ವೆಳ್ಳೈʼ, ʼಮಲ್ಲು ವೆಟ್ಟಿ ಮೈನರ್ʼ ʼಪಾರಂಬರಿಯಂʼ.. ಹೀಗೆ 25 ಸಿನಿಮಾಗಳನ್ನು ನಿರ್ದೇಶನ ಮಾಡಿ ಮಿಂಚಿದ್ದರು. ಸಿನಿಮಾ ಮಾತ್ರವಲ್ಲದೆ ಧಾರಾವಾಹಿಗಳಲ್ಲೂ ನಟಿಸಿ, ಕಿರುತೆರೆಯ ಕೆಲ ಧಾರಾವಾಹಿಗಳನ್ನೂ ನಿರ್ದೇಶಿಸಿದ್ದರು. ನಿರ್ಮಾಪಕರಾಗಿಯೂ ಇಂಡಸ್ಟ್ರಿಯಲ್ಲಿ ಹೆಸರು ಮಾಡಿದ್ದರು.

2022 ರಲ್ಲಿ ʼಕುಕು ವಿತ್ ಕೊಮಾಲಿʼ ಕಾರ್ಯಕ್ರಮದ ಸ್ಪರ್ಧಿಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು.

35 ವರ್ಷಗಳ ಸಿನಿ ಜರ್ನಿಯಲ್ಲಿ ಸುಮಾರು 450 ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅವರು,ಕಾಜಲ್ ಅಗರ್ವಾಲ್ ಅವರ ʼಘೋಸ್ಟಿʼ ಚಿತ್ರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

ಪತ್ನಿ ಮತ್ತು ಮಗನನ್ನು ಅವರು ಅಗಲಿದ್ದಾರೆ.

 

andolanait

Recent Posts

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

3 mins ago

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

13 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

15 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

17 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

18 hours ago