BREAKING NEWS

ತಮಿಳಿನ ಜನಪ್ರಿಯ ನಟ, ನಿರ್ದೇಶಕ ಮನೋಬಾಲಾ ನಿಧನ

ಚೆನ್ನೈ: ಕಾಲಿವುಡ್‌ ನಲ್ಲಿ ನಟ, ನಿರ್ದೇಶಕರಾಗಿ ಅಪಾರ ಖ್ಯಾತಿ ಗಳಸಿದ್ದ ಮನೋಬಾಲಾ (69) ಬುಧವಾರ (ಮೇ 3) ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲ ಸಮಯದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ನಿಧನದ ಸುದ್ದಿಯನ್ನು ನಟ-ನಿರ್ದೇಶಕ ಜಿಎಂ ಕುಮಾರ್ ಟ್ವಿಟರ್‌ ನಲ್ಲಿ ತಿಳಿಸಿದ್ದಾರೆ.

1979 ರಲ್ಲಿ ಭಾರತಿರಾಜ ಅವರ ʼಪುತಿಯ ವಾರ್ಪುಗಳ್ʼ ಚಿತ್ರದ ಮೂಲಕ ‌ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನೂರಕ್ಕೂ ಅಧಿಕ ಸಿನಿಮಾದಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು.

ಕಮಲ್ ಹಾಸನ್ ಅವರ ಸಲಹೆಯ ಮೇರೆಗೆ ಭಾರತಿರಾಜ ಅವರಡಿಯಲ್ಲಿ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಇದಾದ ಬಳಿಕ 1982 ರಲ್ಲಿ ʼಆಗಾಯ ಗಂಗೈʼ ಚಿತ್ರದ ಮೂಲಕ ಮೊದಲ ಬಾರಿ ತಮ್ಮ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದರು.

ʼಪಿಳ್ಳೈ ನಿಲಾʼ, ʼಊರ್ಕಾವಲನ್ʼ, ʼಎನ್ ಪುರುಷಾನ್ತನ್ ಎನಕ್ಕು ಮಟ್ಟುಮ್ತಾನ್ʼ, ʼಕರುಪ್ಪು ವೆಳ್ಳೈʼ, ʼಮಲ್ಲು ವೆಟ್ಟಿ ಮೈನರ್ʼ ʼಪಾರಂಬರಿಯಂʼ.. ಹೀಗೆ 25 ಸಿನಿಮಾಗಳನ್ನು ನಿರ್ದೇಶನ ಮಾಡಿ ಮಿಂಚಿದ್ದರು. ಸಿನಿಮಾ ಮಾತ್ರವಲ್ಲದೆ ಧಾರಾವಾಹಿಗಳಲ್ಲೂ ನಟಿಸಿ, ಕಿರುತೆರೆಯ ಕೆಲ ಧಾರಾವಾಹಿಗಳನ್ನೂ ನಿರ್ದೇಶಿಸಿದ್ದರು. ನಿರ್ಮಾಪಕರಾಗಿಯೂ ಇಂಡಸ್ಟ್ರಿಯಲ್ಲಿ ಹೆಸರು ಮಾಡಿದ್ದರು.

2022 ರಲ್ಲಿ ʼಕುಕು ವಿತ್ ಕೊಮಾಲಿʼ ಕಾರ್ಯಕ್ರಮದ ಸ್ಪರ್ಧಿಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು.

35 ವರ್ಷಗಳ ಸಿನಿ ಜರ್ನಿಯಲ್ಲಿ ಸುಮಾರು 450 ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅವರು,ಕಾಜಲ್ ಅಗರ್ವಾಲ್ ಅವರ ʼಘೋಸ್ಟಿʼ ಚಿತ್ರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

ಪತ್ನಿ ಮತ್ತು ಮಗನನ್ನು ಅವರು ಅಗಲಿದ್ದಾರೆ.

 

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

3 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

8 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

11 hours ago