ಮೈಸೂರು: ಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆಗೆ ದೊಡ್ಡ ಇತಿಹಾಸವಿದೆ. ಅಂದಿನ ಆಳರಸರ ಕಾಲದಲ್ಲಿ ಅರಮನೆಯ ರಕ್ಷಣೆಗಾಗಿ ನಿರ್ಮಿಸಲಾಗಿದ್ದ ಕೋಟೆ ನೋಡಲು ಸಹ ಆಕರ್ಷಕವಾಗಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ನಿರ್ಮಿಸಲಾಗಿದ್ದ ಕೋಟೆ ಚಿತ್ತಾಕರ್ಷಕವಾಗಿತ್ತು.ಕೆಲ ದಿನಗಳಿಂದ ಶಿಥಿಲಾವಸ್ಥೆಯಲ್ಲಿತ್ತು ಈಗ ಕುಸಿತವಾಗಿದೆ.
ನಿರಂತರ ಮಳೆಗೆ ಅರಮನೆಯ ಕೋಟೆ ಕುಸಿಯುವ ಹಂತ ತಲುಪಿತ್ತು. ಕೋಟೆ ದುರಸ್ತಿಗೆ ಅರಮನೆ ಮಂಡಳಿ, ಜಿಲ್ಲಾಡಳಿತ ಮುಂದಾಗಬೇಕಿತ್ತು. ಯಾವ ಕ್ಷಣದಲ್ಲಾದ್ರೂ ಮೈಸೂರು ಅರಮನೆಯ ಐತಿಹಾಸಿಕ ಕೋಟೆ ಕುಸಿಯುವ ಭೀತಿ ಎದುರಾದರೂ ಯಾರೊಬ್ಬರೂ ಗಮನಿಸದ ಕಾರಣ ಇದೀಗ ಕೋಟೆ ಕುಸಿದು ಬಿದ್ದಿದೆ. ಈ ಬಾರಿ ಮೈಸೂರಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಅದರಲ್ಲೂ ಕಳೆದ 3 ತಿಂಗಳಿಂದ ಹೆಚ್ಚು ಮಳೆಯಾಗಿದ್ದು, ಇದ್ರ ಎಫೆಕ್ಟ್ ನಿಂದ ಶಿಥಿಲಾವಸ್ಥೆಯಲ್ಲಿದ್ದ ಕೋಟೆ ಕುಸಿತವಾಗಿದೆ. ಅರಮನೆ ಆಡಳಿತ ಮಂಡಳಿ ಈ ಬಗ್ಗೆ ತ್ವರಿತವಾಗಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…