BREAKING NEWS

ವಿಶ್ವಪ್ರಸಿದ್ಧ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತ

ಮೈಸೂರುಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆ‌‌ಗೆ ದೊಡ್ಡ ಇತಿಹಾಸವಿದೆ. ಅಂದಿನ ಆಳರಸರ ಕಾಲದಲ್ಲಿ ಅರಮನೆಯ ರಕ್ಷಣೆಗಾಗಿ ‌ನಿರ್ಮಿಸಲಾಗಿದ್ದ ಕೋಟೆ‌ ನೋಡಲು ಸಹ ಆಕರ್ಷಕವಾಗಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ನಿರ್ಮಿಸಲಾಗಿದ್ದ ಕೋಟೆ ಚಿತ್ತಾಕರ್ಷಕವಾಗಿತ್ತು.ಕೆಲ ದಿನಗಳಿಂದ ಶಿಥಿಲಾವಸ್ಥೆಯಲ್ಲಿತ್ತು ಈಗ ಕುಸಿತವಾಗಿದೆ.

ನಿರಂತರ ಮಳೆಗೆ ಅರಮನೆಯ ಕೋಟೆ ಕುಸಿಯುವ ಹಂತ ತಲುಪಿತ್ತು. ಕೋಟೆ ದುರಸ್ತಿಗೆ ಅರಮನೆ ಮಂಡಳಿ, ಜಿಲ್ಲಾಡಳಿತ ಮುಂದಾಗಬೇಕಿತ್ತು. ಯಾವ ಕ್ಷಣದಲ್ಲಾದ್ರೂ ಮೈಸೂರು ಅರಮನೆಯ ಐತಿಹಾಸಿಕ ಕೋಟೆ ಕುಸಿಯುವ ಭೀತಿ ಎದುರಾದರೂ ಯಾರೊಬ್ಬರೂ ಗಮನಿಸದ ಕಾರಣ ಇದೀಗ ಕೋಟೆ ಕುಸಿದು ಬಿದ್ದಿದೆ. ಈ ಬಾರಿ ಮೈಸೂರಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಅದರಲ್ಲೂ ಕಳೆದ 3 ತಿಂಗಳಿಂದ ಹೆಚ್ಚು ಮಳೆಯಾಗಿದ್ದು, ಇದ್ರ ಎಫೆಕ್ಟ್ ನಿಂದ ಶಿಥಿಲಾವಸ್ಥೆಯಲ್ಲಿದ್ದ ಕೋಟೆ ಕುಸಿತವಾಗಿದೆ. ಅರಮನೆ ಆಡಳಿತ ಮಂಡಳಿ ಈ ಬಗ್ಗೆ ತ್ವರಿತವಾಗಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

andolana

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

6 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

7 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

9 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

9 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

10 hours ago