ಮೈಸೂರು: ಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆಗೆ ದೊಡ್ಡ ಇತಿಹಾಸವಿದೆ. ಅಂದಿನ ಆಳರಸರ ಕಾಲದಲ್ಲಿ ಅರಮನೆಯ ರಕ್ಷಣೆಗಾಗಿ ನಿರ್ಮಿಸಲಾಗಿದ್ದ ಕೋಟೆ ನೋಡಲು ಸಹ ಆಕರ್ಷಕವಾಗಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ನಿರ್ಮಿಸಲಾಗಿದ್ದ ಕೋಟೆ ಚಿತ್ತಾಕರ್ಷಕವಾಗಿತ್ತು.ಕೆಲ ದಿನಗಳಿಂದ ಶಿಥಿಲಾವಸ್ಥೆಯಲ್ಲಿತ್ತು ಈಗ ಕುಸಿತವಾಗಿದೆ.
ನಿರಂತರ ಮಳೆಗೆ ಅರಮನೆಯ ಕೋಟೆ ಕುಸಿಯುವ ಹಂತ ತಲುಪಿತ್ತು. ಕೋಟೆ ದುರಸ್ತಿಗೆ ಅರಮನೆ ಮಂಡಳಿ, ಜಿಲ್ಲಾಡಳಿತ ಮುಂದಾಗಬೇಕಿತ್ತು. ಯಾವ ಕ್ಷಣದಲ್ಲಾದ್ರೂ ಮೈಸೂರು ಅರಮನೆಯ ಐತಿಹಾಸಿಕ ಕೋಟೆ ಕುಸಿಯುವ ಭೀತಿ ಎದುರಾದರೂ ಯಾರೊಬ್ಬರೂ ಗಮನಿಸದ ಕಾರಣ ಇದೀಗ ಕೋಟೆ ಕುಸಿದು ಬಿದ್ದಿದೆ. ಈ ಬಾರಿ ಮೈಸೂರಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಅದರಲ್ಲೂ ಕಳೆದ 3 ತಿಂಗಳಿಂದ ಹೆಚ್ಚು ಮಳೆಯಾಗಿದ್ದು, ಇದ್ರ ಎಫೆಕ್ಟ್ ನಿಂದ ಶಿಥಿಲಾವಸ್ಥೆಯಲ್ಲಿದ್ದ ಕೋಟೆ ಕುಸಿತವಾಗಿದೆ. ಅರಮನೆ ಆಡಳಿತ ಮಂಡಳಿ ಈ ಬಗ್ಗೆ ತ್ವರಿತವಾಗಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…