BREAKING NEWS

ಗ್ಯಾರಂಟಿ ಜಾರಿ ಮುಂದೂಡಿಕೆ : ನಾಳೆ ನಿಮ್ಮ ಮನೆಗೆ ಬರಲ್ಲ ಗೃಹಲಕ್ಷ್ಮೀ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್‌ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಗುರುವಾರ ಇದರ ಮಾಹಿತಿ ನೀಡಿದ್ದರು.

ಯಾವ ರೀತಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು ಯಾರೆಲ್ಲಾ ಸಲ್ಲಿಕೆ ಮಾಡಬೇಕು ಎನ್ನುವುದರ ಬಗ್ಗೆ ಪತ್ರಿಕಾ ಪ್ರಕಟಣೆ ಕೂಡ ನೀಡಲಾಗಿತ್ತು. ಆದರೆ, ಗುರುವಾರ ಸರ್ಕಾರದ ಕ್ಯಾಬಿನೆಟ್‌ ಸಭೆಯ ಬಳಿಕ ಈ ಗ್ಯಾರಂಟಿ ಜಾರಿ ಮುಂದೂಡಿಕೆಯಾಗಿದ್ದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಿಷ್ಠ ನಾಲ್ಕೈದು ದಿನಗಳ ಕಾಲ ಗೃಹ ಲಕ್ಷ್ಮೀ ಯೋಜನೆ ಮುಂದೂಡಿಕೆಯಾಗಿದ್ದಾಗಿ ತಿಳಿಸಿದ್ದಾರೆ. ಶುಕ್ರವಾರ ಯೋಜನೆ ಲಾಂಚ್‌ ಆಗೋದಿಲ್ಲ ಎಂದು ತಿಳಿಸಿದ್ದಾರೆ. ಯೋಜನೆ ಅರ್ಜಿ ಭರ್ತಿ ಮಾಡಲು ಬೇರೆ ಬೇರೆ ಅವಕಾಶ ಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ನೀಡಿದ್ದ ಪ್ರತಿಕಾ ಪ್ರಕಟಣೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಶುಕ್ರವಾರದಿಂದ ಆರಂಭವಾಗಲಿದೆ ಎಂದು ತಿಳಿಸಲಾಗಿತ್ತು. ಬೆಂಗಳೂರು ಒನ್‌, ಗ್ರಾಮ್‌ ಒನ್‌ನಲ್ಲಿ ನೋಂದಣಿಗೆ ಅವಕಾಶ ಇರಲಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿಯೂ ನೋಂದಣಿಗೆ ಅವಕಾಶವಿದೆ. ಇದಕ್ಕೆ ಬ್ಯಾಂಕ್‌, ಆಧಾರ್‌,ಪತಿ ಅಥವಾ ಮಗ ತೆರಿಗೆದಾರರು ಅಲ್ಲ ಎಂದು ತೋರಿಸುವ ಒಂದು ಪ್ರತಿಯನ್ನು ಲಗತ್ತಿಸಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುತ್ತದೆ. ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ.

lokesh

Recent Posts

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

13 mins ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

1 hour ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

1 hour ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

2 hours ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago