BREAKING NEWS

ಗ್ಯಾರಂಟಿ ಜಾರಿ ಮುಂದೂಡಿಕೆ : ನಾಳೆ ನಿಮ್ಮ ಮನೆಗೆ ಬರಲ್ಲ ಗೃಹಲಕ್ಷ್ಮೀ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್‌ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಗುರುವಾರ ಇದರ ಮಾಹಿತಿ ನೀಡಿದ್ದರು.

ಯಾವ ರೀತಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು ಯಾರೆಲ್ಲಾ ಸಲ್ಲಿಕೆ ಮಾಡಬೇಕು ಎನ್ನುವುದರ ಬಗ್ಗೆ ಪತ್ರಿಕಾ ಪ್ರಕಟಣೆ ಕೂಡ ನೀಡಲಾಗಿತ್ತು. ಆದರೆ, ಗುರುವಾರ ಸರ್ಕಾರದ ಕ್ಯಾಬಿನೆಟ್‌ ಸಭೆಯ ಬಳಿಕ ಈ ಗ್ಯಾರಂಟಿ ಜಾರಿ ಮುಂದೂಡಿಕೆಯಾಗಿದ್ದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಿಷ್ಠ ನಾಲ್ಕೈದು ದಿನಗಳ ಕಾಲ ಗೃಹ ಲಕ್ಷ್ಮೀ ಯೋಜನೆ ಮುಂದೂಡಿಕೆಯಾಗಿದ್ದಾಗಿ ತಿಳಿಸಿದ್ದಾರೆ. ಶುಕ್ರವಾರ ಯೋಜನೆ ಲಾಂಚ್‌ ಆಗೋದಿಲ್ಲ ಎಂದು ತಿಳಿಸಿದ್ದಾರೆ. ಯೋಜನೆ ಅರ್ಜಿ ಭರ್ತಿ ಮಾಡಲು ಬೇರೆ ಬೇರೆ ಅವಕಾಶ ಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ನೀಡಿದ್ದ ಪ್ರತಿಕಾ ಪ್ರಕಟಣೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಶುಕ್ರವಾರದಿಂದ ಆರಂಭವಾಗಲಿದೆ ಎಂದು ತಿಳಿಸಲಾಗಿತ್ತು. ಬೆಂಗಳೂರು ಒನ್‌, ಗ್ರಾಮ್‌ ಒನ್‌ನಲ್ಲಿ ನೋಂದಣಿಗೆ ಅವಕಾಶ ಇರಲಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿಯೂ ನೋಂದಣಿಗೆ ಅವಕಾಶವಿದೆ. ಇದಕ್ಕೆ ಬ್ಯಾಂಕ್‌, ಆಧಾರ್‌,ಪತಿ ಅಥವಾ ಮಗ ತೆರಿಗೆದಾರರು ಅಲ್ಲ ಎಂದು ತೋರಿಸುವ ಒಂದು ಪ್ರತಿಯನ್ನು ಲಗತ್ತಿಸಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುತ್ತದೆ. ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ.

lokesh

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

3 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

7 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

7 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

7 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

8 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

8 hours ago