ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್), ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8 ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.
ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೈಬ್ಸೈಟ್ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.
ಯುಪಿಎಸ್ಸಿ ಪರೀಕ್ಷೆಯೂ ಮುಂದೂಡಿಕೆ :ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. 2024ನೇ ಸಾಲಿನ ಪೂರ್ವಭಾವಿ ಪರೀಕ್ಷೆಯನ್ನು ಮೇ 26ರ ಬದಲು ಜೂನ್ 16ರಂದು ನಡೆಸಲಾಗುವುದು ಎಂದು ಯುಪಿಎಸ್ಸಿ ತಿಳಿಸಿದೆ. ಮೇ 26ರಂದು ನಡೆಸಲಾಗುವುದು ಎಂದು ಯುಪಿಎಸ್ಸಿಯು ಮಾರ್ಚ್ 19ರಂದು ಘೋಷಿಸಿತ್ತು. ಈಗ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…