BREAKING NEWS

ಪ್ರಭಾಸ್‌ ನಟನೆಯ ‘ಸಲಾರ್‌‘ ಚಿತ್ರ ಸೆಪ್ಟೆಂಬರ್‌ 28ಕ್ಕೆ ಬಿಡುಗಡೆ

ಬೆಂಗಳೂರು: ಪ್ರಶಾಂತ್‌ ನೀಲ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಸಲಾರ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದರಿಂದ ಪ್ರಭಾಸ್‌ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ.

ಸಿನಿಮಾ 2023ರ ಸೆ.28ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಟ್ವೀಟ್‌ ಮಾಡಿ ಘೋಷಣೆ ಮಾಡಿದೆ.

ವಿಜಯ್‌ ಕಿರಗಂದೂರು ತಮ್ಮ ಹೊಂಬಾಳೆ ಫಿಲ್ಮ್ಸ್‌ ಸಂಸ್ಥೆಯಡಿ ಸಲಾರ್‌ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ₹400 ಕೋಟಿಗೂ ಮೀರಿದ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ತನ್ನ ಹೈವೋಲ್ಟೇಜ್ ಆ್ಯಕ್ಷನ್ ದೃಶ್ಯಗಳಿಂದ ಸಿನಿಮಾ ಸಾಕಷ್ಟು ಸುದ್ದಿಯಲ್ಲಿದೆ.

‘ಸಲಾರ್’ ಪಕ್ಕಾ ಆ್ಯಕ್ಷನ್ ಚಿತ್ರವಾಗಿದ್ದು ಭಾರತವಲ್ಲದೆ, ಯೂರೋಪ್, ಆಫ್ರಿಕಾ ಮುಂತಾದ ಕಡೆ ಚಿತ್ರೀಕರಣವಾಗಿದೆ. ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ.

ಈ ಚಿತ್ರವು ಐದು ಭಾಷೆಗಳಲ್ಲಿ ಮೂಡಿ ಬರಲಿದ್ದು, ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದ ಖ್ಯಾತ ಕಲಾವಿದರ ದಂಡೇ ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದೆ

 

andolanait

Recent Posts

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

1 hour ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

2 hours ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

2 hours ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

5 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

5 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

5 hours ago